ಬೆಂಗಳೂರು: ಕನ್ನಡದ ಹಿರಿಯ ನಟ ಸತ್ಯಜಿತ್ ಅವರಿಗೆ ಹಲವು ದಿನಗಳಿಂದ ಆನಾರೋಗ್ಯವು ಕಾಡುತಿದೆ . ಕೆಲವು ದಿನದ ಹಿಂದೆ ಅವರ ಒಂದು ಕಾಲುನ್ನು ಗ್ಯಾಂಗ್ರೀನ್ ನಿಂದಾಗಿ ಕತ್ತರಿಸಲಾಗಿತ್ತು. ಈಗ ಅವರನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸದ್ಯ ಸತ್ಯಜಿತ್ ಪರಿಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿದೆ.ಈಗ ಸತ್ಯಜಿತ್ ಆವರಿಗೆ 72 ವರ್ಷ ವಯಸ್ಸಾಗಿದ್ದು, ಸಕ್ಕರೆ ಕಾಯಿಲೆ ಮತ್ತು ಇನ್ನಿತರ ವಯೋಸಹಜ ಅನಾರೋಗ್ಯದ ಕಾರಣ ಸತ್ಯಜಿತ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸತ್ಯಜಿತ್ ಪುತ್ರ ಹೇಳಿರುವ ಪ್ರಕಾರ ಪ್ರಸ್ತುತ ಅವರ ಪರಿಸ್ಥಿತಿ ಗಂಭೀರವಾಗಿದೆ. ದಿನದಿಂದ ದಿನಕ್ಕೆ ಆರೋಗ್ಯ ಹದಗೆಡುತ್ತಲೇ ಇದೆ. ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ಹಲವು ದಿನಗಳಿಂದ ಸತ್ಯಜಿತ್ಗೆ ಆರೋಗ್ಯ ಕೈಕೊಟ್ಟಿದ್ದರಿಂದ ಅವರಿಗೆ ಆರ್ಥಿಕ ಸಂಕಷ್ಟ ಕೂಡ ಎದುರಾಗಿದೆ. ಒಂದು ಕಾಲದಲ್ಲಿ ಅವರು ಬಹು ಬೇಡಿಕೆಯ ಫೋಷಕ ನಟನಾಗಿದ್ದರು. ನೂರಾರು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ.
ಸತ್ಯಜಿತ್ ಅವರು 1986ರಿಂದಲೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ಅಪ್ಪು, ಅರಸು, ಅಭಿ, ನಮ್ಮ ಬಸವ ಆಪ್ತಮಿತ್ರ ಗ್ರಾಮ ದೇವತೆ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಅವರು ನಟಿಸಿ ಜನಪ್ರಿಯತೆ ಪಡೆದಿದ್ದಾರೆ. ಹಲವು ಬಗೆಯ ಪಾತ್ರಗಳಿಗೆ ಅವರು ಬಣ್ಣ ಹಚ್ಚಿ ನಮನ್ನು ರಂಜಿಸಿದ್ದಾರೆ . ಪೋಷಕ ಪಾತ್ರಗಳಲ್ಲಿ ಹೆಚ್ಚಾಗಿ ಗಮನ ಸೆಳೆಯುತ್ತಿದ್ದ ಸತ್ಯಜಿತ್ ಅವರಿಗೆ ಗ್ಯಾಂಗ್ರಿನ್ ಕಾಣಿಸಿಕೊಂಡ ಬಳಿಕ ಬೇಡಿಕೆ ಕಡಿಮೆ ಆಯಿತು. 2018ರಲ್ಲಿ ತೆರೆಕಂಡ ಪ್ರಿಯಾಂಕಾ ಉಪೇಂದ್ರ ನಟನೆ ‘ಸೆಕೆಂಡ್ ಹಾಫ್’ ಚಿತ್ರದ ಬಳಿಕ ಬೇರೆ ಯಾವುದೇ ಸಿನಿಮಾದಲ್ಲಿ ಸತ್ಯಜಿತ್ ಕಾಣಿಸಿಕೊಂಡಿಲ್ಲ.