Saturday, May 18, 2024
Homeಕರಾವಳಿಕನ್ನಡದ ಹಿರಿಯ ಪೋಷಕ ನಟ ಸತ್ಯಜಿತ್ ಅರೋಗ್ಯ ಸ್ಥಿತಿ ಗಂಭೀರ!

ಕನ್ನಡದ ಹಿರಿಯ ಪೋಷಕ ನಟ ಸತ್ಯಜಿತ್ ಅರೋಗ್ಯ ಸ್ಥಿತಿ ಗಂಭೀರ!

spot_img
- Advertisement -
- Advertisement -

ಬೆಂಗಳೂರು: ಕನ್ನಡದ ಹಿರಿಯ ನಟ ಸತ್ಯಜಿತ್​ ಅವರಿಗೆ ಹಲವು ದಿನಗಳಿಂದ ಆನಾರೋಗ್ಯವು ​ಕಾಡುತಿದೆ . ಕೆಲವು ದಿನದ ಹಿಂದೆ ಅವರ ಒಂದು ಕಾಲುನ್ನು ಗ್ಯಾಂಗ್ರೀನ್ ನಿಂದಾಗಿ ಕತ್ತರಿಸಲಾಗಿತ್ತು. ಈಗ ಅವರನ್ನು ಬೆಂಗಳೂರಿನ ಬೌರಿಂಗ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸದ್ಯ ಸತ್ಯಜಿತ್​ ಪರಿಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿದೆ.ಈಗ ಸತ್ಯಜಿತ್ ಆವರಿಗೆ 72 ವರ್ಷ ವಯಸ್ಸಾಗಿದ್ದು, ಸಕ್ಕರೆ ಕಾಯಿಲೆ ಮತ್ತು ಇನ್ನಿತರ ವಯೋಸಹಜ ಅನಾರೋಗ್ಯದ ಕಾರಣ ಸತ್ಯಜಿತ್​ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸತ್ಯಜಿತ್​ ಪುತ್ರ ಹೇಳಿರುವ ಪ್ರಕಾರ ಪ್ರಸ್ತುತ ಅವರ ಪರಿಸ್ಥಿತಿ ಗಂಭೀರವಾಗಿದೆ. ದಿನದಿಂದ ದಿನಕ್ಕೆ ಆರೋಗ್ಯ ಹದಗೆಡುತ್ತಲೇ ಇದೆ. ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ಹಲವು ದಿನಗಳಿಂದ ಸತ್ಯಜಿತ್​ಗೆ ಆರೋಗ್ಯ ಕೈಕೊಟ್ಟಿದ್ದರಿಂದ ಅವರಿಗೆ ಆರ್ಥಿಕ ಸಂಕಷ್ಟ ಕೂಡ ಎದುರಾಗಿದೆ.​ ಒಂದು ಕಾಲದಲ್ಲಿ ಅವರು ಬಹು ಬೇಡಿಕೆಯ ಫೋಷಕ ನಟನಾಗಿದ್ದರು. ನೂರಾರು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ.

ಸತ್ಯಜಿತ್​ ಅವರು 1986ರಿಂದಲೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ಅಪ್ಪು, ಅರಸು, ಅಭಿ, ನಮ್ಮ ಬಸವ ಆಪ್ತಮಿತ್ರ ಗ್ರಾಮ ದೇವತೆ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಅವರು ನಟಿಸಿ ಜನಪ್ರಿಯತೆ ಪಡೆದಿದ್ದಾರೆ. ಹಲವು ಬಗೆಯ ಪಾತ್ರಗಳಿಗೆ ಅವರು ಬಣ್ಣ ಹಚ್ಚಿ ನಮನ್ನು ರಂಜಿಸಿದ್ದಾರೆ . ಪೋಷಕ ಪಾತ್ರಗಳಲ್ಲಿ ಹೆಚ್ಚಾಗಿ ಗಮನ ಸೆಳೆಯುತ್ತಿದ್ದ ಸತ್ಯಜಿತ್​ ಅವರಿಗೆ ಗ್ಯಾಂಗ್ರಿನ್​ ಕಾಣಿಸಿಕೊಂಡ ಬಳಿಕ ಬೇಡಿಕೆ ಕಡಿಮೆ ಆಯಿತು. 2018ರಲ್ಲಿ ತೆರೆಕಂಡ ಪ್ರಿಯಾಂಕಾ ಉಪೇಂದ್ರ ನಟನೆ ‘ಸೆಕೆಂಡ್​ ಹಾಫ್​’ ಚಿತ್ರದ ಬಳಿಕ ಬೇರೆ ಯಾವುದೇ ಸಿನಿಮಾದಲ್ಲಿ ಸತ್ಯಜಿತ್​ ಕಾಣಿಸಿಕೊಂಡಿಲ್ಲ.

- Advertisement -
spot_img

Latest News

error: Content is protected !!