- Advertisement -
- Advertisement -
ಬೆಂಗಳೂರು: ಇನ್ನು ಮುಂದೆ ರಾಜ್ಯದಲ್ಲಿ ನಡೆಯುವ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಆಯೋಜನೆಯಲ್ಲಿ ಕಡ್ಡಾಯ ಕನ್ನಡ ಬಳಕೆ ಮಾಡುವಂತೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದಲ್ಲಿ ಆಯೋಜಿಸುವ ಕಾರ್ಯಕ್ರಮಗಳಲ್ಲಿ, ಪರದೆಗಳಲ್ಲಿ ಕಡ್ಡಾಯ ಕನ್ನಡ ಬಳಸುವಂತೆ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಾಜ್ಯ ಸರ್ಕಾರವನ್ನು ಕೋರಿತ್ತು. ಹೀಗಾಗಿ ರಾಜ್ಯ ಸರ್ಕಾರ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕಡ್ಡಾಯ ಕನ್ನಡ ಬಳಕೆ ಆದೇಶ ಹೊರಡಿಸಿದೆ.
- Advertisement -