- Advertisement -
- Advertisement -
ಉಳ್ಳಾಲ: ಕಾಂತಾರ ಸಿನಿಮಾದ ನಟಿ ಸಪ್ತಮಿ ಗೌಡ, ಮಂಗಳೂರಿನ ದೈವೀ ಕ್ಷೇತ್ರಗಳಿಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದ್ದಾರೆ.
ಮಂಗಳೂರಿನ ಕಲ್ಲಾಪು ಬಳಿಯ ಬುರ್ದುಗೋಳಿಯ ಗುಳಿಗ ದೇವಸ್ಥಾನ, ಕೊರಗ ತನಿಯ ದೈವಗಳ ಉದ್ಭವ ಶಿಲೆಯ ಆದಿಸ್ಥಳಕ್ಕೆ ಭೇಟಿ ನೀಡಿರುವ ಅವರು, ಕೆಲ ಸಮಯ ಅಲ್ಲಿಯೇ ಇದ್ದು ಪೂಜೆ ಸಲ್ಲಿಸಿದ್ದಾರೆ. ಇವರ ಜೊತೆ ಸಿನಿಮಾದಲ್ಲಿ ಕೆಲಸ ಮಾಡಿದ ಹಲವು ಸದಸ್ಯರು ಮತ್ತು ಸಪ್ತಮಿ ಕುಟುಂಬ ಕೂಡ ಈ ಸಂದರ್ಭದಲ್ಲಿ ಹಾಜರಿತ್ತು. ಕ್ಷೇತ್ರದ ಸಮಿತಿಯವರು ನಟಿಯನ್ನು ಬರಮಾಡಿಕೊಂಡು, ಕ್ಷೇತ್ರದ ಮಹಿಮೆಯನ್ನು ತಿಳಿಸಿದರು.
- Advertisement -