- Advertisement -
- Advertisement -
ಕಾಂತಾರ ಸಿನಿಮಾದ ಪ್ರಭಾವ ಎಷ್ಟರ ಮಟ್ಟಿಗೆ ಇದೆ ಎಂಬುದಕ್ಕೆ 3ನೇ ತರಗತಿ ವಿದ್ಯಾರ್ಥಿಯೊಬ್ಬನ ಉತ್ತರವೇ ಸಾಕ್ಷಿ. ಹೌದು ಮೂರನೇ ತರಗತಿಯ ವಿದಾರ್ಥಿ ತನ್ನ ಉತ್ತರ ಪತ್ರಿಕೆಯಲ್ಲಿ ಕಾಂತಾರದ ಉತ್ತರ ಬರೆಯುವ ಮೂಲಕ ಅಚ್ಚರಿ ಮೂಡಿಸಿದ್ದಾನೆ.
ಪರೀಕ್ಷೆಯಲ್ಲಿ ‘ಸಾರ್ವಜನಿಕ ಸ್ಥಳಗಳನ್ನು ಯಾರು ರಕ್ಷಿಸುತ್ತಾರೆ? ತಿಳಿದು ಬರೆ’ ಎಂದು ಪ್ರಶ್ನೆ ಕೇಳಲಾಗಿತ್ತು. ಅದಕ್ಕೆ ವಿದ್ಯಾರ್ಥಿ ‘ಕ್ಷೇತ್ರಪಾಲ, ಗುಳಿಗಾ ಮತ್ತು ದೈವ’ ಎಂದು ಬರೆದಿದ್ದಾನೆ. ಪುಟ್ಟ ಬಾಲಕ ಪರೀಕ್ಷೆಯಲ್ಲಿ ಬರೆದ ಉತ್ತರ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
- Advertisement -