- Advertisement -
- Advertisement -
ಬೆಳ್ತಂಗಡಿ: ಭಾರಿ ಮಳೆ ಸುರಿದ ಪರಿಣಾಮ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಕಪಿಲ ನದಿಯಲ್ಲಿ ಜೂ.25 ರಂದು ನೀರು ಉಕ್ಕಿ ಹರಿದ ಪರಿಣಾಮ ಮತ್ಸ್ಯ ಕ್ಷೇತ್ರವೆಂದೇ ಪ್ರಸಿದ್ಧವಾಗಿರುವ ಶಿಶಿಲೇಶ್ವರ ದೇವಾಲಯಕ್ಕೆ ನೀರು ನುಗ್ಗಿದೆ.
ನದಿನೀರಿನ ಮಟ್ಟ ಏರಿಕೆಯಾದ ಪರಿಣಾಮ ಗರ್ಭಗುಡಿ ಪ್ರವೇಶಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪಕ್ಕದಲ್ಲೇ ಇರುವ ಕಿಂಡಿ ಆಣೆಕಟ್ಟು (ದೇವಳದ ಸಂಪರ್ಕ ರಸ್ತೆ) ನೀರಿನಿಂದ ಸಂಪೂರ್ಣ ಮುಳುಗಡೆ ಗೊಂಡಿದ್ದು ಸದ್ಯಕ್ಕೆ ಅಲ್ಲಿರುವ ತೂಗು ಸೇತುವೆ ವರೆಗೂ ನೀರು ಹರಿಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನೀರು ಪ್ರವಾಹದ ರೀತಿ ಹರಿಯುತ್ತಿರುವುದರಿಂದ ಆ ಭಾಗದ ಜನರಿಗೆ ಸಂಚಾರಕ್ಕೆ ಕಷ್ಟವಾಗಿದೆ ಎಂದು ಪಂಚಾಯತ್ ಅಧ್ಯಕ್ಷ ಸುಧೀನ್ ಡಿ. ತಿಳಿಸಿದ್ದಾರೆ.
- Advertisement -