- Advertisement -
- Advertisement -
ಬಂಟ್ವಾಳ: ಮಹತೊಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಯಾರೊ ಕಿಡಿಗೇಡಿಗಳು ಅಕ್ರಮವಾಗಿ ಚಪ್ಪಲಿ ಹಾಕಿ ಪ್ರವೇಶ ಮಾಡಿ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದಲ್ಲದೆ, ದೇವಸ್ಥಾನದಲ್ಲಿ ಚಪ್ಪಲಿ ಹಾಕಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಪ್ರಕರಣಕ್ಕೆ ಸಂಬಂಧಿಸಿ ದೇವಸ್ಥಾನದ ಆಡಳಿತ ಮಂಡಳಿ ಆರೊಪಿಗಳನ್ನು ಶೀಘ್ರ ಬಂಧಿಸಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕಾಗಿ ಪುಂಜಾಲಕಟ್ಟೆ ಠಾಣೆಗೆ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಗ್ರಾಮಣಿ ವೆಂಕಟ್ರಮಣ ಮುಚ್ಚಿನ್ನಾಯ , ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಪ್ರವೀಣ ಪೂಜಾರಿ ಪಡಂತ್ರ್ಯಬೆಟ್ಟು , ಕಾವಳ ಮೂಡುರು ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಅಜಿತ್ ಶೆಟ್ಟಿ ಕಾರಿಂಜ ,ದೇವಸ್ಥಾನದ ಮ್ಯಾನೇಜರ್ ವಿನಯ ಕುಮಾರ್ ಎ, ಶರ್ಮಿತ್ ಜೈನ್ ಕಾರಿಂಜ ಉಪಸ್ಥಿತರಿದ್ದರು.
- Advertisement -