ಕಾರ್ಕಳ: ಇಲ್ಲಿನ ಹಿಂದೂ ಯುವತಿಯನ್ನು ಅಪಹರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ಬಂಧಿಸಲ್ಪಟ್ಟು ನ್ಯಾಯಾಂಗ ಬಂಧನದಲ್ಲಿದ್ದ ಅಲ್ತಾಫ್ ಹಾಗೂ ಶ್ರಾವೆದ್ ರಿಚರ್ಡ್ ಕ್ವಾಡ್ರಸ್ ಅವರನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಉಡುಪಿ ಎಸ್.ಪಿ. ಡಾ| ಅರುಣ್ಕುಮಾರ್ ತಿಳಿಸಿದ್ದಾರೆ.
ಶನಿವಾರ ಕಾರ್ಕಳದಲ್ಲಿ ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಹಾಜರು ಪಡಿಸಲಾಗಿದ್ದು, ಈ ಸಂದರ್ಭ ನಗರ ಠಾಣೆ ಪೊಲೀಸರ ಮನವಿಯಂತೆ ಆರೋಪಿಗಳನ್ನು ಹೆಚ್ಚಿನ ತನಿಖೆಗಾಗಿ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಿಧಿಸಿ ಎಂದು ನ್ಯಾಯಾಲಯ ಆದೇಶಿಸಿತು.
ಘಟನೆ ನಡೆದ ಸ್ಥಳಕ್ಕೆ ಶನಿವಾರದಂದು ಆರೋಪಿಗಳನ್ನು ಪೊಲೀಸರು ಕರೆದೊಯ್ದು ಸ್ಥಳ ಮಹಜರು ನಡೆಸಿದರು. ಘಟನಾ ಸ್ಥಳದಲ್ಲಿ ಬಿಯರ್ ಬಾಟಲಿ, ನೀರಿನ ಬಾಟಲಿ ಮತ್ತಿತರ ವಸ್ತುಗಳು ಕಂಡುಬಂದಿವೆ.
ಇನ್ನು ಅತ್ಯಾಚಾರ ವಿಚಾರದ ಕುರಿತು ಅಲ್ತಾಫ್ ತಾಯಿ ಅಯಿಷಾ ಮಗ ಟಿಪ್ಪರ್ ವಾಹನ ಹೊಂದಿದ್ದು, ಮರಳು ವ್ಯವಹಾರ ಮಾಡುತ್ತಿದ್ದ. ಆತನಿಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಆತ ಬೆಳಗ್ಗೆ ಮನೆಯಿಂದ ಹೋದರೆ ರಾತ್ರಿ 10 -12 ಗಂಟೆಗೆ ಮರಳುತ್ತಿದ್ದ. ಆತ ಅತ್ಯಾಚಾರ ಎಸಗಿದ್ದ ಬಗ್ಗೆ ನಮಗೆ ಮಾಹಿತಿ ಇಲ್ಲ ಎಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.
ಅಲ್ತಾಫ್ ಸಹೋದರ ಮಾಧ್ಯಮಕ್ಕೆ, ಅಲ್ತಾಫ್ ಸ್ನೇಹಿತರ ಜತೆಗೂಡಿ ಇಂತಹ ಕೆಟ್ಟ ಹವ್ಯಾಸ ಬೆಳೆಸಿಕೊಂಡಿದ್ದೇನೆ, ಮೊದಲು ದುಃಶ್ಚಟ ಹೊಂದಿರಲಿಲ್ಲ. ಆತ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದ ಬಗ್ಗೆಯೂ ನಮಗೆ ಮಾಹಿತಿಯಿಲ್ಲ ಎಂದು ಆತನ ಸಹೋದರ ತಿಳಿಸಿದ್ದಾರೆ.