Friday, May 3, 2024
Homeಕರಾವಳಿಉಡುಪಿಕಾರ್ಕಳ; ಮಹಿಳೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಹೊತ್ತಿದ್ದಾತ ಆತ್ಮಹತ್ಯೆಗೆ ಶರಣು

ಕಾರ್ಕಳ; ಮಹಿಳೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಹೊತ್ತಿದ್ದಾತ ಆತ್ಮಹತ್ಯೆಗೆ ಶರಣು

spot_img
- Advertisement -
- Advertisement -

ಕಾರ್ಕಳದಲ್ಲಿ ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಮಹಿಳೆಗೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪ ಹೊತ್ತಿದ್ದ ವ್ಯಕ್ತಿಯು ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸಂತೋಷ್ ಆತ್ಮಹತ್ಯೆಗೆ ಶರಣಾದವ. ಸಂತೋಷ್ ಈದು ಗ್ರಾಮದ ಹಾಡಿಯಲ್ಲಿ ಮರವೊಂದಕ್ಕೆ ನೇಣುಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ.

ಕಾರ್ಕಳ ಮಾರ್ಕೆಟ್ ರೋಡ್ ನ ಮಹಿಳಾ ಕೋ ಆಪರೇಟಿವ್ ಸೊಸೈಟಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಮೀಳಾ ಎಂಬಾಕೆಗೆ ರೂ.3 ಲಕ್ಷ ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡಿದ ಬಗ್ಗೆ ಸಂತೋಷ್ ಮೇಲೆ ಆರೋಪವಿತ್ತು.ಆತನ ಕಿರುಕುಳದಿಂದಾಗಿ ಮಾನಸಿಕವಾಗಿ ನೊಂದಿದ್ದ ಬ್ಯಾಂಕ್ ಸಿಬ್ಬಂದಿ ಪ್ರವೀಳಾ ಜು.14ರ ಬೆಳಿಗ್ಗೆ‌ ಮನೆಯಿಂದ ಬ್ಯಾಂಕ್ ಗೆ‌ ಆಗಮಿಸಿ ಅಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿತ್ತು.

ಈ ಕುರಿತಂತೆ ಪ್ರಮೀಳಾರವರ ಸಹೋದರ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ತನಿಖೆ ನಡೆಯುತ್ತಿತ್ತು. ಸಂತೋಷ್ ಶವ ಆತ್ಮಹತ್ಯೆಗೈದ ರೀತಿಯಲ್ಲಿ ಪತ್ತೆಯಾಗಿದೆ. ಶವ ಕೊಳೆತು ಹೋಗಿದ್ದು ಆತ್ಮಹತ್ಯೆಗೈದು ಎರಡು ದಿನ ಆಗಿರಬಹುದು ಎಂದು ಶಂಕಿಸಲಾಗಿದೆ.

- Advertisement -
spot_img

Latest News

error: Content is protected !!