Monday, May 6, 2024
Homeಕರಾವಳಿಉಡುಪಿನಿವೃತ್ತ ಸೇನಾಧಿಕಾರಿ, ಸಮಾಜ ಸೇವಕ ಕರ್ನಲ್ ರಾಮಚಂದ್ರ ರಾವ್ ನಿಧನ

ನಿವೃತ್ತ ಸೇನಾಧಿಕಾರಿ, ಸಮಾಜ ಸೇವಕ ಕರ್ನಲ್ ರಾಮಚಂದ್ರ ರಾವ್ ನಿಧನ

spot_img
- Advertisement -
- Advertisement -

ಉಡುಪಿ: ಭಾರತೀಯ ಭೂಸೇನೆಯಲ್ಲಿ ವಿವಿಧ ಹುದ್ದೆಗಳನ್ನು ಪಡೆದು ಚೀನಾ, ಪಾಕಿಸ್ತಾನದೊಂದಿಗಿನ ಯುದ್ಧ ಹಾಗೂ ಬಾಂಗ್ಲಾ ವಿಮೋಚನೆಯ ಕಾರ್ಯಾಚರಣೆಯಲ್ಲಿ ಭಾಗವಹಿಸಿ ದೇಶ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ನಿವೃತ್ತ ಸೇನಾಧಿಕಾರಿ, ಸಮಾಜ ಸೇವಕ ಕರ್ನಲ್ ರಾಮಚಂದ್ರ ರಾವ್ ( 88 ವರ್ಷ) ನಿಧನ ಹೊಂದಿದ್ದಾರೆ.

ನಿವೃತ್ತಿಯ ಬಳಿಕ ಉಡುಪಿಗೆ ಬಂದು ಮಾಜಿ ಸೈನಿಕರ ವೇದಿಕೆ, ಪೂರ್ಣಪ್ರಜ್ಞಾ ಕಾಲೇಜಿನ ಆಡಳಿತ ಮಂಡಳಿ, ಶ್ರೀಕೃಷ್ಣ ಬಾಲನಿಕೇತನ, ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ‘ನವೀನ್ ಪೇಜಾವರ ಟ್ರಸ್ಟ್’ ಮೂಲಕ ಬಡವರಿಗೆ ಆಸರೆಯಾಗಿದ್ದರು.

2017ರಲ್ಲಿ ಪತ್ನಿ ಮಾಲತಿ ರಾವ್ ರೊಂದಿಗೆ ಇವರಿಗೆ ಯಕ್ಷಗಾನ ಕಲಾರಂಗವು ಎಸ್. ಗೋಪಾಲಕೃಷ್ಣರ ಸಂಸ್ಮರಣಾ ‘ಸೇವಾಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮೃತರು ಪತ್ನಿ ಇಬ್ಬರು ಪುತ್ರರು ಓರ್ವ ಪುತ್ರಿ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಇವರ ನಿಧನಕ್ಕೆ ಶಾಸಕ ಕೆ.ರಘುಪತಿ ಭಟ್, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

- Advertisement -
spot_img

Latest News

error: Content is protected !!