- Advertisement -
- Advertisement -
ಬೆಂಗಳೂರು : ರಾಜ್ಯದ ರೈತರಿಗೆ ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡ ಸಿಹಿಸುದ್ದಿ ನೀಡಿದ್ದಾರೆ, ರಾಜ್ಯ ರೈತರಿಗೆ ಅಗತ್ಯಕ್ಕೆ ತಕ್ಕಂತೆ ರಸಗೊಬ್ಬರ ಪೂರೈಸಲಾಗುತ್ತಿದ್ದು, ಯಾವುದೇ ಕೊರತೆ ಇಲ್ಲ ಎಂದು ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡುತ್ತ , ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ, ಎಲ್ಲ ಗೋಡನ್ ಗಳಲ್ಲಿ ರಸಗೊಬ್ಬರ ಸಂಗ್ರಹವಿದೆ. ಆದರೂ ಬ್ಲಾಕ್ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಸುಮಾರು 148 ಪರವಾನಿಗೆ ರದ್ದು ಮಾಡಿದ್ದೇವೆ. ಗೋಡನ್ ಫುಲ್ ಇದ್ರೂ ಹೊರಗಡೆ ನೋ ಸ್ಟಾಕ್ ಬೋರ್ಡ್ ಹಾಕುತ್ತಿದ್ದಾರೆ ಎಂದರು.
ರಾಜರಾಜೇಶ್ವರಿ ನಗರ ವಿಧಾನಸಭೆ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಆಯ್ಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಆರ್.ಆರ್. ನಗರಕ್ಕೆ ಇಬ್ಬರ ಹೆಸರನ್ನು ಆಯ್ಕೆ ಮಾಡಿ ಹೈಕಮಾಂಡ್ ಗೆ ಕಳಿಸಿದ್ದೇವೆ. ಈ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು .
- Advertisement -