- Advertisement -
- Advertisement -
ಬೆಂಗಳೂರು: ಕೊರೊನಾ ಅಟ್ಟಹಾಸದಿಂದ ತತ್ತರಿಸಿ ಹೋಗಿರುವ ದೆಹಲಿ ಮತ್ತು ತಮಿಳುನಾಡಿನಿಂದ ಕರ್ನಾಟಕಕ್ಕೆ ಬರುವವರನ್ನು ಕಡ್ಡಾಯವಾಗಿ 3 ದಿನ ಸಾಂಸ್ಥಿಕ ಕ್ವಾರಂಟೈನ್, ಹಾಗೂ 11 ದಿನ ಹೋಮ್ ಕ್ವಾರಂಟೈನ್ ನಲ್ಲಿರಿಸಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವವರನ್ನು ಏಳು ದಿನ ಕ್ವಾರಂಟೈನ್ ಮಾಡಲಾಗುವುದು, ಚೆನ್ನೈ, ದೆಹಲಿಯಿಂದ ಬರುವವರಿಗೆ ಮೂರು ದಿನ ಇನ್ಸ್ಟಿಟ್ಯೂಷನಲ್ ಮತ್ತು 11 ದಿನ ಹೋಂ ಕ್ವಾರಂಟೈನ್ ಮಾಡಲಾಗುವುದು. ಮಾಸ್ಕ್ ಧರಿಸದ ವ್ಯಕ್ತಿಗಳು, ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. 200 ರೂ ದಂಡ ವಿಧಿಸಲಾಗುವುದು ಎಂದು ಸಿಎಂ ಎಚ್ಚರಿಕೆ ನೀಡಿದರು.
- Advertisement -