- Advertisement -
- Advertisement -
ಕನ್ನಡದ ‘ಪವರ್ ಸ್ಟಾರ್’ ಪುನೀತ್ ರಾಜ್ಕುಮಾರ್ ಅವರ ಕುಟುಂಬ ಸದಸ್ಯರೊಂದಿಗೆ ಸಮಾಲೋಚಿಸಿದ ನಂತರ ರಾಜ್ಯ ಸರ್ಕಾರವು ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುವ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಹೇಳಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೂಕ್ತ ರೀತಿಯಲ್ಲಿ ಆಯೋಜಿಸಲು ಸಮಿತಿಯನ್ನು ರಚಿಸಲಾಗುವುದು ಮತ್ತು ಪುನೀತ್ ರಾಜ್ ಕುಮಾರ್ ಅವರ ಕುಟುಂಬ ಸದಸ್ಯರೊಂದಿಗೆ ಸಮಾಲೋಚಿಸಿದ ನಂತರ ದಿನಾಂಕವನ್ನು ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.
ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಪುನೀತ್ ಚಿಕ್ಕ ವಯಸ್ಸಿನಲ್ಲಿ ದೊಡ್ಡ ಸಾಧನೆ ಮಾಡಿದ ಮಹಾನ್ ವ್ಯಕ್ತಿಯಾಗಿದ್ದು, ಅವರ ಜೀವನ ಮತ್ತು ಸೇವೆ ಎಲ್ಲರಿಗೂ ಮಾದರಿ ಮತ್ತು ಸ್ಫೂರ್ತಿಯಾಗಿದೆ. ಹಾಗೇ ಈ ಸಂದರ್ಭ ಬೊಮ್ಮಾಯಿ ಅವರು ಪುನೀತ್ ನಟಿಸಿರುವ ‘ಜೇಮ್ಸ್’ ಚಿತ್ರದ ಬಿಡುಗಡೆಗೆ ಶುಭ ಹಾರೈಸಿದರು.
- Advertisement -