Monday, June 30, 2025
Homeತಾಜಾ ಸುದ್ದಿಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಸದಸ್ಯ ನಿಟ್ಟೆ ಶಶಿಧರ ಶೆಟ್ಟಿ ಇನ್ನಿಲ್ಲ

ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಸದಸ್ಯ ನಿಟ್ಟೆ ಶಶಿಧರ ಶೆಟ್ಟಿ ಇನ್ನಿಲ್ಲ

spot_img
- Advertisement -
- Advertisement -

ಮಂಗಳೂರು: ಅಖಿಲ ಭಾರತ ತುಳು ಒಕ್ಕೂಟದ ಗೌರವ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಸದಸ್ಯ, ಬಂಟರ ಮಾತೃಸಂಘದ ಮಾಜಿ ಕಾರ್ಯದರ್ಶಿ, ಲಯನ್ಸ್ ಕ್ಲಬ್ ಇಂಟರ್‌ನ್ಯಾಷನಲ್ ಇದರ ದ.ಕ ಜಿಲ್ಲಾ ಧುರೀಣ, ತುಳು ಕೂಟ ಕುಡ್ಲ ಇದರ ಹಿರಿಯ ಸದಸ್ಯರಾದ ಪದವಿನಂಗಡಿ ಗಣೇಶೋತ್ಸವ ಸಮಿತಿಯ ಮಾಜಿ ಅಧ್ಯಕ್ಷ, ಶಾರದಾ ಕ್ಯಾಟರರ್ಸ್ ಸಂಸ್ಥೆಗಳ ಮಾಲಕ, ಮಂಗಳೂರು ಪದವಿನಂಗಡಿ ನಿವಾಸಿ ನಿಟ್ಟೆ ಶಶಿಧರ ಶೆಟ್ಟಿ (66) ಅಲ್ಪ ಕಾಲದ ಅಸೌಖ್ಯದಿಂದ ಬೆಳಿಗ್ಗೆ ಮಂಗಳೂರು ಪದವಿನಂಗಡಿ ಅಲ್ಲಿರುವ ಸ್ವಗೃಹದಲ್ಲಿ ನಿಧನರಾದರು.

ಮೃತರು ಅನೇಕ ತುಳು ಸಂಘಗಳ ಸಂಘಟಕರಾಗಿದ್ದು ಅವರು ಪತ್ನಿ, ಇಬ್ಬರು ಸುಪುತ್ರಿಯರನ್ನು ಅಗಲಿದ್ದಾರೆ. ಸುಪುತ್ರಿ ವಿದೇಶದಿಂದ ಆಗಮಿಸಬೇಕಾಗಿರುವುದರಿಂದ ಅಂತ್ಯಕ್ರಿಯೆ ಜೂನ್ 4ರಂದು ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

 ಅಗಲಿದ ದಿವ್ಯಾತ್ಮಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲಸಾರ್, ಸದಸ್ಯ ಕಡಂದಲೆ ಸುರೇಶ್ ಭಂಡಾರಿ, ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ, ಅ.ಭಾ.ತುಳು ಒಕ್ಕೂಟದ ಅಧ್ಯಕ್ಷ ಧರ್ಮಪಾಲ ಯು.ದೇವಾಡಿಗ, ತುಳು ಸಂಘ ಬರೋಡ ಅಧ್ಯಕ್ಷ ಶಶಿಧರ ಬಿ.ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಮಂಗಳೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ನಿಟ್ಟೆಗುತ್ತು ರವಿರಾಜ್ ಶೆಟ್ಟಿ, ಬಂಟರ ಮಾತೃ ಸಂಘದ ತಾಲೂಕು ಸಮಿತಿ ಸಂಚಾಲಕ ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ, ಇಂಟರ್‌ನ್ಯಾಷನಲ್ ಬಂಟ್ಸ್ ವೇಲ್ಫ್ಪೇರ್ ಟ್ರಸ್ಟ್ ನ ಗೌರವಾಧ್ಯಕ್ಷ ಎ.ಸದಾನಂದ ಶೆಟ್ಟಿ, ಇಂದ್ರಾಳಿ ಜಯಕರ ಶೆಟ್ಟಿ , ದಾಮೋದರ ನಿಸರ್ಗ , ಕದ್ರಿ ನವನೀತ ಶೆಟ್ಟಿ , ಮುಲ್ಕಿ ಕರುಣಾಕರ ಶೆಟ್ಟಿ, ದಿವಾಕರ ಎಸ್.ಶೆಟ್ಟಿ ಸಾಂಗ್ಲಿ, ತಾರಾನಾಥ ಶೆಟ್ಟಿ ಬೋಳಾರ, ಪ್ರದೀಪ್ ಆಳ್ವ ಕದ್ರಿ, ಲೀಲಾಕ್ಷ ಬಿ.ಕರ್ಕೇರ ಹಾಗೂ ಒಕ್ಕೂಟದ ಪದಾಧಿಕಾರಿಗಳು ಸೇರಿದಂತೆ ನೂರಾರು ಗಣ್ಯರು ಶ್ರದ್ಧಾಂಜಲಿ ಕೋರಿದ್ದಾರೆ.

- Advertisement -
spot_img

Latest News

error: Content is protected !!