ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನ 33 ನೇ ದಿನದ ಮಾಹಿತಿ ಪತ್ರವನ್ನು ಸಿ.ಟಿ. ರವಿ ಅವರು ಬಿಡುಗಡೆಗೊಳಿಸಿದರು.
ಬೆಂಗಳೂರಿನಲ್ಲಿ ವಿಕಾಸ ಟ್ರಸ್ಟ್ ನಡೆಸುತ್ತಿರುವ ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನ 33 ನೇ ದಿನದ ಮಾಹಿತಿ ಪತ್ರವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಚಿಕ್ಕಮಗಳೂರು ಶಾಸಕರಾದ ಶ್ರೀ ಸಿ.ಟಿ. ರವಿ ಅವರು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಕಾಸರಗೋಡು ಜಿಲ್ಲೆಯ ಸಂಸ್ಕೃತಿ , ಭಾಷೆ ಉಳಿಸುವ ನಿಟ್ಟಿನಲ್ಲಿ ವಿಕಾಸ ಟ್ರಸ್ಟ್ ನಡೆಸಲು ಉದ್ದೇಶಿಸಿರುವ ಹಲವು ಯೋಜನೆಗಳ ಕುರಿತು ಸಿ.ಟಿ. ರವಿ ಅವರೊಂದಿಗೆ ವಿಚಾರ ವಿನಿಮಯ ನಡೆಸಲಾಯಿತು.
ಇದುವರೆಗೆ ಬಿಡುಗಡೆಗೊಳಿಸಿದ 33 ಮಾಹಿತಿ ಪತ್ರಗಳನ್ನು ಆಸಕ್ತಿಯಿಂದ ವೀಕ್ಷಿಸಿದ ಸಿ.ಟಿ. ರವಿ ಅವರು ಕಾಸರಗೋಡಿನ ಸಾಂಸ್ಕೃತಿಕ ಹಿರಿಮೆಯ ಕುರಿತು ಅಭಿಮಾನ ವ್ಯಕ್ತಪಡಿಸಿದರು.
ವಿಕಾಸ ಟ್ರಸ್ಟ್ ಅಧ್ಯಕ್ಷರಾದ ರವಿನಾರಾಯಣ ಗುಣಾಜೆ , ಸದಸ್ಯರಾದ ಸುಖೇಶ್ ರೈ , ವಿಖ್ಯಾತ ಎನ್.ವಿ. ಉಪಸ್ಥಿತರಿದ್ದರು.