Thursday, May 16, 2024
Homeಕರಾವಳಿಮಂಗಳೂರಿನಲ್ಲಿ ಕಾಶಿ ಮಠಾಧೀಶ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಚಾತುರ್ಮಾಸ ವ್ರತ

ಮಂಗಳೂರಿನಲ್ಲಿ ಕಾಶಿ ಮಠಾಧೀಶ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಚಾತುರ್ಮಾಸ ವ್ರತ

spot_img
- Advertisement -
- Advertisement -

ಮಂಗಳೂರು : ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶಾರ್ವರಿ ನಾಮ ಸಂವತ್ಸರದ ಚಾತುರ್ಮಾಸ ವ್ರತವು ಈ ಬಾರಿ ಮಂಗಳೂರು ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಸಂಸ್ಥಾನದ ಶಾಖಾ ಮಠದಲ್ಲಿ ನೂತನವಾಗಿ ನಿರ್ಮಿಸಲಾದ ವನಿತಾ ಅಚ್ಚುತ್ ಪೈ ಸಂಭಾಗಣದ ಮೇಲಿನ ಅಂತಸ್ಥಿನಲ್ಲಿರುವ ಶ್ರೀ ಸಂಯಮಿಂದ್ರ ಸಭಾ ಭವನದಲ್ಲಿ ನೆರವೇರಲಿರುವುದು. ಈ ಪ್ರಯುಕ್ತ ಚಾತುರ್ಮಾಸ ವ್ರತದ ಸವಿವರವಾದ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀಗಳವರು ಗುರುವಾರ ಕೋಟ ಕಾಶಿ ಮಠ ದಲ್ಲಿ ಬಿಡುಗಡೆ ಗೊಳಿಸಿದರು .
ಈ ಸಂದರ್ಭದಲ್ಲಿ ಕೊಂಚಾಡಿ ಕಾಶಿ ಮಠದ ವ್ಯವಸ್ಥಾಪಕ ಸಮಿತಿಯ ಶ್ರೀ ವೆಂಕಟರಮಣ ದೇವಳದ ಅಧ್ಯಕ್ಷ ಡಿ . ವಾಸುದೇವ ಕಾಮತ್ , ಶ್ರೀ ಮಹಾಲಸಾ ನಾರಾಯಣಿ ದೇವಸ್ಥಾನದ ವ್ಯವಸ್ಥಾಪಕ ಸಮಿತಿಯ ಅಧ್ಯಕ್ಷ ಕಸ್ತುರಿ ಸದಾಶಿವ ಪೈ , ಜಿ . ರತ್ನಾಕರ್ ಕಾಮತ್, ಶಶಿಧರ್ ಪೈ ಮಾರೂರ್ , ಪ್ರಶಾಂತ್ ಪೈ , ದೀಪಕ್ ಕುಡ್ವ ಮುಂತಾದವರು ಉಪಸ್ಥಿತರಿದ್ದರು

- Advertisement -
spot_img

Latest News

error: Content is protected !!