Tuesday, May 7, 2024
HomeUncategorizedಬೆಂಗಳೂರಿನಲ್ಲಿ ಕಾಸರಗೋಡಿನ ಯುವಕನ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ಕಾಸರಗೋಡಿನ ಯುವಕನ ಬರ್ಬರ ಹತ್ಯೆ

spot_img
- Advertisement -
- Advertisement -

ಬೆಂಗಳೂರು; ವಿವಾಹ ನಿಶ್ಚಯವಾಗಿದ್ದ ಕಾಸರಗೋಡಿನ ಯುವಕನೋರ್ವನ‌ ಕತ್ತು ಸೀಳಿ ಮೊಬೈಲ್ ದೋಚಿಕೊಂಡು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸೋನು ಥಾಮ್ಸನ್ ಕೊಲೆಯಾದ ವ್ಯಕ್ತಿ.ಇವರಿಗೆ ಇನ್ನು ಕೆಲವೇ ದಿನಗಳಲ್ಲಿ ನಿಶ್ಚಿತಾರ್ಥಕ್ಕೆ‌ ದಿನ ನಿಗದಿಯಾಗಿತ್ತು.

ಮೂಲತಃ  ಕಾಸರಗೋಡಿನವರಾದ ಸೋನು, ಜಿಗಣಿ ಕೈಗಾರಿಕಾ ಪ್ರದೇಶದ ಟಾಟಾ ಅಡ್ವಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.‌ರಾತ್ರಿ ಸೆಕೆಂಡ್ ಶಿಫ್ಟ್ ಕೆಲಸ ಮುಗಿಸಿ ಹೊರ ಬರುತ್ತಿದ್ದಂತೆ ಅಡ್ಡಗಟ್ಟಿದ ಮೂವರು ಮಂದಿ ಚಾಕು ತೋರಿಸಿ‌ ಮೊಬೈಲ್ ಕೊಡುವಂತೆ ಬೆದರಿಸಿದ್ದಾರೆ‌. ಇದನ್ನು ವಿರೋಧಿಸಿದಾಗ ದುಷ್ಕರ್ಮಿಗಳು ಇರಿದು ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದಾರೆ.

ಘಟನೆ ಬೆನ್ನಲ್ಲೇ ಕೈಗಾರಿಕಾ ಪ್ರದೇಶದಲ್ಲಿ ದರೋಡೆಕೋರರು ಹೆಚ್ಚಾಗಿದ್ದು ಪೊಲೀಸರು ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ.

- Advertisement -
spot_img

Latest News

error: Content is protected !!