Saturday, June 28, 2025
Homeಕರಾವಳಿರಸ್ತೆ, ಮೋರಿ, ಚರಂಡಿಯಂತಹ ಸಮಸ್ಯೆಗಳ ಬಗ್ಗೆ ಮಾತನಾಡಬೇಡಿ, ನಿಮ್ಮ ಮಕ್ಕಳನ್ನು ಲವ್ ಜಿಹಾದ್‌ನಿಂದ ರಕ್ಷಿಸಿ: ಬಿಜೆಪಿ...

ರಸ್ತೆ, ಮೋರಿ, ಚರಂಡಿಯಂತಹ ಸಮಸ್ಯೆಗಳ ಬಗ್ಗೆ ಮಾತನಾಡಬೇಡಿ, ನಿಮ್ಮ ಮಕ್ಕಳನ್ನು ಲವ್ ಜಿಹಾದ್‌ನಿಂದ ರಕ್ಷಿಸಿ: ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ವಿವಾದಾತ್ಮಕ ಹೇಳಿಕೆ

spot_img
- Advertisement -
- Advertisement -

ಮಂಗಳೂರು: ನೀವು ರಸ್ತೆ, ಮೋರಿ, ಚರಂಡಿಯಂತಹ ಸಮಸ್ಯೆಗಳ ಬಗ್ಗೆ ಮಾತನಾಡಬೇಡಿ. ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸಿ. ನಿಮ್ಮ ಮಕ್ಕಳನ್ನು ಲವ್ ಜಿಹಾದ್‌ನಿಂದ ರಕ್ಷಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಂಗಳೂರಿನ  ಟಿಎಂಎ ಪೈ ಹಾಲ್‌ನಲ್ಲಿ ನಡೆದ ‘ಬಿಜೆಪಿ ಬೂತ್ ವಿಜಯ ಅಭಿಯಾನ’ದ ದ.ಕ.ಜಿಲ್ಲಾ ಮಟ್ಟದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾಮತ್ ಕೈ ಎತ್ತಿಲ್ಲ, ನಳಿನ್ ನಕ್ಕಿಲ್ಲ ಎನ್ನಬೇಡಿ. ನಕ್ಕಿದರೆ ನಿಮಗೇನು ಬಂಗಾರ ಸಿಗುವುದಿಲ್ಲ. ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಲವ್ ಜಿಹಾದ್ ವಿರುದ್ಧ ಧ್ವನಿ ಎತ್ತಿ. ಲವ್ ಜಿಹಾದ್ ನಿಲ್ಲಿಸಲು ಭಾರತೀಯ ಜನತಾ ಪಾರ್ಟಿ ಬೇಕು. ಅದರ ವಿರುದ್ಧ ಕಾನೂನನ್ನು ಬಿಜೆಪಿ ಸರಕಾರ ತರುತ್ತೆ. ಲವ್ ಜಿಹಾದ್ ಬಹಳ ದೊಡ್ಡ ಸಾಮಾಜಿಕ ಪಿಡುಗಾಗಿದೆ. ಅದಕ್ಕೆ ನಿಮ್ಮ ಮಕ್ಕಳು ಬಲಿಯಾಗದಂತೆ ನೋಡಿಕೊಳ್ಳಬೇಕು. ಹಾಗಾಗಿ ಬಿಜೆಪಿಗೆ ಅಧಿಕಾರ ನೀಡಿ ಎಂದ ನಳಿನ್ ಕುಮಾರ್ ಕಟೀಲ್, ಯಕ್ಷಗಾನದಲ್ಲೂ ಬಿಜೆಪಿಯ ಪರ ಪ್ರಚಾರ ಮಾಡಿ ಎಂದು ಕರೆ ನೀಡುವ ಮೂಲಕ ವಿವಾದ ಹುಟ್ಟು ಹಾಕಿದ್ದಾರೆ.

- Advertisement -
spot_img

Latest News

error: Content is protected !!