ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ, ಅಕಾಡೆಮಿ ಸಭಾಂಗಣದಲ್ಲಿ ಅ.04 ರಂದು ʼಕಾವ್ಯಾಂ ವ್ಹಾಳೊ-7ʼ ಶೀರ್ಷಿಕೆಯಡಿ ಕವಿಗೋಷ್ಟಿಯನ್ನು ಆಯೋಜಿಸಲಾಗಿತ್ತು.
ʼಕಾವ್ಯಾಂ ವ್ಹಾಳೊ-7ʼ ಶೀರ್ಷಿಕೆಯಡಿ ಕವಿಗೋಷ್ಟಿಯ ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಆಲ್ವಾರಿಸ್ರವರು ವಹಿಸಿದ್ದರು.
ಇವರು ಪ್ರಾಸ್ತಾವಿಕವಾಗಿ ಮಾತಾನಾಡಿ, ಕವಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಅಕಾಡೆಮಿಯು ಪ್ರತಿ ತಿಂಗಳು ಕವಿಗೋಷ್ಟಿಯನ್ನು ಹಮ್ಮಿಕೊಳ್ಳುತ್ತದೆ. ಇದು ಎಲ್ಲಾ ಯುವ ಕವಿಗಳಿಗೆ ತಮ್ಮ ಕವಿತೆಗಳನ್ನು ಪ್ರಸ್ತುತಪಡಿಸಲು ಅವಕಾಶವಾಗಲಿʼ ಎಂದು ಹೇಳಿದರು.
ಇವರು ಮಾತಾನಾಡಿ, “ತುಂಬಾ ಜನರಿಗೆ ಸಂಗೀತದಲ್ಲಿ ಆಸಕ್ತಿ ಇದೆ. ಸಂಗೀತಕ್ಕೆ ತುಂಬಾ ಪ್ರೋತ್ಸಾಹ ಸಿಗುತ್ತಿದೆ. ಕೊಂಕಣಿಯಲ್ಲೂ ಸಂಗೀತ ಹಾಡುತ್ತೇನೆ ಎಂಬುದು ನನಗೆ ಹೆಮ್ಮೆಯ ವಿಷಯʼ ಎಂದು ಹೇಳಿದರು.ಪ್ರಮುಖ ಉಪಾನ್ಯಾಸಕರಾಗಿ ಆಗಮಿಸಿದ, ಸಾಹಿತಿ ಹಾಗೂ ನಾಟಕ ಬರಹಗಾರರಾದ ಫಾ| ಆಲ್ವಿನ್ ಸೆರಾವೊರವರು ಸಾಹಿತ್ಯದ ಬಗ್ಗೆ ಮಾತಾನಾಡಿ ಸಾಹಿತ್ಯವು ಕೇವಲ ಕಾಲ್ಪನಿಕವಲ್ಲದೇ ಅನುಭವದಿಂದ ಬರುತ್ತದೆ. ಪ್ರತಿ ಕೆಲಸವು ಚಿಂತನೆಯಿಂದ ಪ್ರಾರಂಭವಾಗುತ್ತದೆ. ಶೃಂಗಾರ, ನವರಸವಿದ್ದಲ್ಲಿ ಮಾತ್ರ ಅದನ್ನು ಸಾಹಿತ್ಯ ಎಂದು ಹೇಳಬಹುದು,” ಎಂದರು.
ಖ್ಯಾತ ಹಿರಿಯ ಸಂಗೀತಗಾರರಾದ ಮುರಳೀಧರ್ ಕಾಮತ್ರವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಶ್ರೀಮತಿ ತಾರಾ ಲವೀನಾ ಫೆರ್ನಾಂಡಿಸ್ರವರು ಕವಿಗೋಷ್ಟಿಯನ್ನು ನಡೆಸಿದರು. ಶ್ರೀಮತಿ ಮರಿಯಾ ಪಿಂಟೊ, ವಿಲ್ಪ್ರೆಡ್ ಆರ್ ಪಾಂಗ್ಳಾ, ರಾಧಕೃಷ್ಣ ನಾಯಕ್, ಶ್ರೀಮತಿ ಡಿಂಪಲ್ ಫೆರ್ನಾಂಡಿಸ್, ಡಾ. ಪ್ರೇಮ್ ಮೊರಾಸ್, ವಿಕಾಸ್ ಲಸ್ರಾದೊ, ಕು. ವೆನಿಶಾ ಜೆಸ್ಸಿಕಾ ಸಲ್ಡಾನ್ಹಾ, ಅವಿಲ್ ರಸ್ಕೀನ್ಹಾ, ಗ್ಲ್ಯಾನಿಶ್ ಮಾರ್ಟಿಸ್ ಮುಂತಾದವರು ತಮ್ಮ ಕವಿತೆಗಳನ್ನು ವಾಚಿಸಿದರು.ಅಕಾಡೆಮಿ ಸದಸ್ಯೆ ಸಪ್ನಾ ಕ್ರಾಸ್ತಾ ಕಾರ್ಯಕ್ರಮ ನಿರೂಪಿಸಿದರು. ಸದಸ್ಯರಾದ ರೊನಾಲ್ಡ್ ಕ್ರಾಸ್ತಾ ವಂದಿಸಿದರು. ಅಕಾಡೆಮಿ ಸದಸ್ಯರಾದ ನವೀನ್ ಲೋಬೊ, ಸಮರ್ಥ್ ಭಟ್, ಅಕ್ಷತಾ ನಾಯಕ್ ಉಪಸ್ಥಿತರಿದ್ದರು.


