Saturday, June 28, 2025
Homeತಾಜಾ ಸುದ್ದಿಮಂಗಳೂರು: ಬಾಬರಿ ಮಸೀದಿ ಬಿಟ್ಟುಕೊಟ್ಟರೆ ಎಲ್ಲವೂ ಅಂತ್ಯವಾಗಲ್ಲ : ಭಾರತ ಈಗ ಹಿಂದುಳಿದ ರಾಷ್ಟ್ರವಾಗಲು ಮುಂದಾಗಿದೆ:...

ಮಂಗಳೂರು: ಬಾಬರಿ ಮಸೀದಿ ಬಿಟ್ಟುಕೊಟ್ಟರೆ ಎಲ್ಲವೂ ಅಂತ್ಯವಾಗಲ್ಲ : ಭಾರತ ಈಗ ಹಿಂದುಳಿದ ರಾಷ್ಟ್ರವಾಗಲು ಮುಂದಾಗಿದೆ: ಕೇರಳ ಶಾಸಕ ಡಾ.ಕೆ.ಟಿ. ಜಲೀಲ್ ಹೇಳಿಕೆ

spot_img
- Advertisement -
- Advertisement -

ಮಂಗಳೂರು: ಬಾಬರಿ ಮಸೀದಿಯನ್ನು ನಾವು ಬಿಟ್ಟುಕೊಟ್ಟರೆ ಎಲ್ಲವೂ ಅಂತ್ಯವಾಗಲಿದೆ ಎಂದು ಮುಸ್ಲಿಮರು ಭಾವಿಸಿದರು. ಹಾಗಾಗಿ ಮಸೀದಿ ಬಿಟ್ಟುಕೊಡಲು ಮಾನಸಿಕವಾಗಿ ತಯಾರಾದರು. ಆದರೆ ಅಲ್ಲಿಗೆ ಎಲ್ಲವೂ ಅಂತ್ಯವಾಗಲ್ಲ. ಅವರೀಗ ಮಥುರಾ, ನಂತರ ಬೇರೆಲ್ಲೋ ಗುರಿಯಾಗಿಸುತ್ತಿದ್ದಾರೆ. ಬಾಬರಿ ಮಸೀದಿಯ ಸಮಸ್ಯೆ ಬಗೆಹರಿದರೆ ಎಲ್ಲವೂ ಮುಗಿಯುವುದಿಲ್ಲ. ವಿಶ್ವದ ಎಲ್ಲ ದೇಶಗಳು ಪ್ರಸ್ತುತ ಅಭಿವೃದ್ಧಿಯತ್ತ ಹೆಜ್ಜೆ ಇಟ್ಟಿದೆ. ತೀವ್ರ ಸಂಪ್ರದಾಯವಾದಿ ದೇಶವಾದ ಸೌದಿ ಕೂಡಾ ಅಭಿವೃದ್ಧಿಯತ್ತ ಮುಖ ಮಾಡಿದೆ. ಎಲ್ಲಾ ಗಲ್ಪ್ ದೇಶಗಳು ಕೂಡಾ ತಮ್ಮ ಹಲವು ನೀತಿಗಳನ್ನು ಬದಲಿಸುತ್ತಿದೆ. ಆದರೆ ಭಾರತ ಈಗ ಹಿಂದುಳಿದ ರಾಷ್ಟ್ರವಾಗಲು ಮುಂದಾಗಿದೆ,”  ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜಾತ್ಯಾತೀತತೆ, ಸಬಲೀಕರಣ ಮತ್ತು ಮುನ್ನಡೆ’ ಎಂಬ ಘೋಷಣೆಯಡಿ  ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಕರ್ನಾಟಕ ರಾಜ್ಯ ಸಮಿತಿ ಆಯೋಜನೆ ಮಾಡಿದ ರಾಜ್ಯಮಟ್ಟದ ಮುಸ್ಲಿಂ ಸಮಾವೇಶವನ್ನು ಕೇರಳದ ಮಾಜಿ ಉನ್ನತ ಶಿಕ್ಷಣ ಸಚಿವ, ಶಾಸಕ ಡಾ. ಕೆ.ಟಿ. ಜಲೀಲ್ ಉದ್ಘಾಟಿಸಿ ಮಾತನಾಡಿದರು.

“ನಮ್ಮ ದೇಶ ಜಾತ್ಯಾತೀತ ರಾಷ್ಟ್ರವಾಗಿದೆ. ಎಲ್ಲವನ್ನು ಭಾರತ ಒಳಗೊಳ್ಳುತ್ತಿದೆ. ಈ ಜಾತ್ಯಾತೀತತೆಯ ಸಂಪ್ರದಾಯವೇ ಪ್ರಜಾಪ್ರಭುತ್ವವನ್ನು ಕಾಯುತ್ತಿರುವುದು.  ನಮ್ಮ ದೇಶವು ಯಾವುದೇ ಧರ್ಮವನ್ನು ಯಾವುದೇ ಕಾಲದಲ್ಲಿ ನಿರಾಕರಿಸಿಲ್ಲ. ಹಿಂದೂ ಧರ್ಮದ ಅಶೋಕ ಚಕ್ರವರ್ತಿ ಕಳಿಂಗ ಯುದ್ದದ ನಂತರ ಬೌಧ್ಧ ಧರ್ಮ ಪಾಲಿಸಿದರು. ಅವರು ಬೌದ್ಧ ಧರ್ಮ ಸ್ವೀಕರಿಸಿದ ನಂತರ ಅವರನ್ನು ಯಾರೂ ಪ್ರಶ್ನಿಸಿಲ್ಲ. ಮುಸ್ಲಿಂ ರಾಜರು 900 ವರ್ಷಗಳ ಕಾಲ ಆಡಳಿತ ನಡೆಸಿದರು. ಒಂದು ವೇಳೆ ಅವರು ಧರ್ಮವನ್ನು ಆಡಳಿತದಲ್ಲಿ ಜೊತೆಯಾಗಿಸಿದ್ದರೆ ಇಷ್ಟೊಂದು ಧೀರ್ಘ ಕಾಲ ಆಡಳಿತ ನಡೆಸಲು ಸಾಧ್ಯವಾಗುತ್ತಿರಲಿಲ್ಲ. ದೇಶದ ಮೊದಲ ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ಮೊಘಲ್ ಸಾಮ್ರಾಜ್ಯದ ಚಕ್ರವರ್ತಿ ಬಹದ್ದೂರೂ ಶಾ ಜಫಾರ್ ದೇಶದ ಬಹಸಂಖ್ಯಾತ ಹಿಂದೂಗಳು ತಮ್ಮ ನಾಯಕರಾಗಿ ಆಯ್ಕೆ ಮಾಡಿದ್ದರು,” ಎಂದು ವಿವರಿಸಿದರು.

“ನಾವು ದೇಶವನ್ನು ಪಾಕಿಸ್ತಾನವನ್ನಾಗಿ ಮಾಡಲು ಶ್ರಮಿಸಬಾರದು. ವಿಭಜನೆಯಾಗಿ ನಿರ್ಮಾಣವಾದ ಪಾಕಿಸ್ತಾನ ಎಂದಿಗೂ ಕೂಡಾ ನೆಮ್ಮದಿಯಿಂದ ಇರುವ ದೇಶವಾಗಿಲ್ಲ. ಅಲ್ಲಿ ಹಿಂಸೆ, ದಾಳಿ ತೀವ್ರ ಮಟ್ಟಕ್ಕೆ ಏರಿದೆ. ಭಾರತವನ್ನು ಪಾಕಿಸ್ತಾನದಂತಹ ರಾಷ್ಟ್ರವನ್ನಾಗಿಸಲು ನಾವು ಅವಕಾಶ ನೀಡಬಾರದು. ನಮ್ಮ ದೇಶದಲ್ಲಿ ಜಾತ್ಯಾತೀತಯೇ ನಮ್ಮ ಜೀವವಾಯು. ಜಾತ್ಯಾತೀತತೆ ಇಲ್ಲವಾದರೆ ಭಾರತ ಇಲ್ಲವಾಗುತ್ತದೆ,” ಎಂದರು.

“ನರೇಂದ್ರ ಮೋದಿ ಸರ್ಕಾರದ ಧಮನಕಾರಿ ಕ್ರಮ ಅಪಾಯಕಾರಿ. ಅದನ್ನು ನಾವು ಪರಾಭವಗೊಳಿಸಬೇಕು. ಎಲ್ಲಾ ಧರ್ಮಗಳು ಬೇರೆ ಬೇರೆಯಾದರೂ ಒಂದೇ ಜಾತ್ಯಾತೀತ ನಂಬಿಕೆ ಹೊಂದಿದೆ. ಬೈಬಲ್, ಕುರಾನ್, ಭಗವದ್ಗೀತೆ ಒಂದೇ ಭಾವೈಕತೆಯನ್ನು ಸಾರುತ್ತದೆ. ನೂರಾರು ವರ್ಷ ಕಾಲ ಆಳಿದ ಬ್ರಿಟಿಷರನ್ನು ಸೋಲಿಸಲು ಸಾಧ್ಯವಾಗುತ್ತದೆ ಎಂದಾದರೆ ಕೇವಲ ಎಂಟು ವರ್ಷ ಆಳಿದ ಮೋದಿ ಸರ್ಕಾರವನ್ನು ಕೂಡಾ ಸೋಲಿಸಲು ನಮಗೆ ಸಾಧ್ಯವಾಗಲಿದೆ,” ಎಂದು ತಿಳಿಸಿದರು.

- Advertisement -
spot_img

Latest News

error: Content is protected !!