Friday, May 17, 2024
Homeಪ್ರಮುಖ-ಸುದ್ದಿಪರಿಸರ ಪ್ರೇಮಿ ಕಾಮೇಗೌಡರ ಆರೋಗ್ಯ ಸ್ಥಿತಿ ಗಂಭೀರ, ಸೂಕ್ತ ಚಿಕಿತ್ಸೆ ಕೊಡಿಸುವಂತೆ ಸರ್ಕಾರಕ್ಕೆ ಹೆಚ್ಡಿಕೆ ಒತ್ತಾಯ

ಪರಿಸರ ಪ್ರೇಮಿ ಕಾಮೇಗೌಡರ ಆರೋಗ್ಯ ಸ್ಥಿತಿ ಗಂಭೀರ, ಸೂಕ್ತ ಚಿಕಿತ್ಸೆ ಕೊಡಿಸುವಂತೆ ಸರ್ಕಾರಕ್ಕೆ ಹೆಚ್ಡಿಕೆ ಒತ್ತಾಯ

spot_img
- Advertisement -
- Advertisement -

ಮಂಡ್ಯ : ಕೊರೊನಾದಿಂದ ಮಂಡ್ಯದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಮೇಗೌಡ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕಾಮೇಗೌಡರು ಕೊರೊನಾ ಹಾಗೂ ಕಾಲು ಇವರೆಡರಿಂದಲೂ ಬಳಲುತ್ತಿದ್ದಾರೆ. ಹಾಗೇ ಅನ್ನ, ನೀರು ಕೂಡ ತ್ಯಜಿಸಿದ್ದಾರೆ. ಹಾಗಾಗಿ ಅವರ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಅವರನ್ನು ನೋಡಿಕೊಳ್ಳೋದಕ್ಕೆ ಅವರ ಜೊತೆ ಒಬ್ಬರೇ ಒಬ್ಬರು ಸಹಾಯಕರು ಕೂಡ ಇಲ್ಲ ಎಂದು ಹೇಳಲಾಗುತ್ತಿದೆ.

ಇನ್ನು ಕಾಮೇಗೌಡ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಗೊತ್ತಾಗುತ್ತಿದ್ದಂತೆ, ಈ ಬಗ್ಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಟ್ವೀಟ್ ಮಾಡಿದ್ದಾರೆ. “ಕೆರೆ ಕಾಮೇಗೌಡರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಉಳಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ರಾಜ್ಯ ಸರ್ಕಾರ ತುರ್ತು ಅವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಒತ್ತಾಯಿಸುತ್ತೇನೆ.ಮನ್ ಕಿ ಬಾತ್ ನಲ್ಲಿ ಕೂಡ ಪ್ರಧಾನಿಯವರು ಕೊಂಡಾಡಿದ್ದಾರೆ. ಮುಖ್ಯಮಂತ್ರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಹೊಗಳಿ ಹೊನ್ನಶೂಲಕ್ಕೆ ಏರಿಸಿದರೆ ಸಾಲದು. ಅನಾರೋಗ್ಯದಿಂದ ಅವರು ಸೋತು ಸುಣ್ಣವಾಗಿರುವಾಗ ಒಳ್ಳೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಸರ್ಕಾರ ಮುಂದಾಗಬೇಕಿದೆ”. ಎಂದು ಟ್ವೀಟ್ ಮಾಡಿದ್ದಾರೆ.

- Advertisement -
spot_img

Latest News

error: Content is protected !!