Friday, June 27, 2025
Homeತಾಜಾ ಸುದ್ದಿಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಪ್ರಕರಣ; ಖಾನಾಪುರ ಸಿಪಿಐ ಮಂಜುನಾಥ...

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಪ್ರಕರಣ; ಖಾನಾಪುರ ಸಿಪಿಐ ಮಂಜುನಾಥ ನಾಯಕ ಅಮಾನತು

spot_img
- Advertisement -
- Advertisement -

ಬೆಳಗಾವಿ: ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಖಾನಾಪುರ ಸಿಪಿಐ ಮಂಜುನಾಥ ನಾಯಕ ಅಮಾನತು ಮಾಡಲಾಗಿದೆ.

ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಖಾನಾಪುರ ಠಾಣೆಗೆ ಕರೆತಂದ ಕರ್ತವ್ಯ ಲೋಪ, ನಿಷ್ಕಾಳಜಿತನ, ಬೇಜಬ್ದಾರಿತನ ಪ್ರದರ್ಶನ ಆರೋಪ ಹಾಗೂ ಅಪಾಧಿತರನ್ನು ಹೊರತುಪಡಿಸಿ ಠಾಣೆಯೊಳಗೆ ಯಾರನ್ನೂ ಬಿಡದಂತೆ ಆದೇಶ ನೀಡಿದ್ದರೂ ನಿರ್ಲಕ್ಷ್ಯ ವಹಿಸಿ ಬಿಜೆಪಿ ನಾಯಕರನ್ನು ಠಾಣೆಯೊಳಗೆ ಬಿಟ್ಟಿರುವ ಆರೋಪದ ಮೇಲೆ ಖಾನಾಪುರ ಸಿಪಿಐ ಮಂಜುನಾಥ ನಾಯಕ ಅವರನ್ನುಅಮಾನತು ಮಾಡಿ ಐಜಿಪಿ ವಿಕಾಸಕುಮಾರ್ ವಿಕಾಸ್ ಆದೇಶ ಹೊರಡಿಸಿದ್ದಾರೆ.

ರವಿ ಅವರನ್ನು ಬಂಧಿಸಿ ತಡರಾತ್ರಿ ಖಾನಾಪುರ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಈ ವೇಳೆ ಠಾಣೆಯ ಹೊರಗಡೆ ಗಲಾಟೆ ಮಾಡಿದ ಬಿಜೆಪಿ ನಾಯಕರನ್ನು ಸಿಪಿಐ ಮಂಜುನಾಥ ಠಾಣೆಯೊಳಗೆ ಬಿಟ್ಟಿದ್ದರು. ಇದಾದ ಬಳಿಕ ಠಾಣೆಯಲ್ಲಿ ಬಿಜೆಪಿ ನಾಯಕರು ಸಭೆ ಮಾಡಿದ್ದರು.

ಪೊಲೀಸ್‌ ಆಯುಕ್ತ ಯಡಾ ಮಾರ್ಟಿನ್, ಡಿಸಿಪಿ ರೋಹನ ಜಗದೀಶ ಅವರೂ ಅರ್ಧಗಂಟೆ ಚರ್ಚೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಗರಂ ಆಗಿರುವ ಗೃಹಸಚಿವ ಪರಮೇಶ್ವರ ಅವರು ಪೊಲೀಸರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಐಜಿಪಿ ವಿಕಾಸಕುಮಾರ್ ವಿಕಾಸ್ ಅವರು ಸಿಪಿಐ ಮಂಜುನಾಥ ನಾಯಕ ಅವರನ್ನುಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

- Advertisement -
spot_img

Latest News

error: Content is protected !!