Saturday, June 28, 2025
Homeಅಪರಾಧಕಾಡುಕೋಣವನ್ನು ಕೊಂದು ಒಣ ಮಾಂಸವನ್ನಾಗಿ ಪರಿವರ್ತನೆ; ಶಂಕಿತ ಆರೋಪಿಗಳು ಪರಾರಿ

ಕಾಡುಕೋಣವನ್ನು ಕೊಂದು ಒಣ ಮಾಂಸವನ್ನಾಗಿ ಪರಿವರ್ತನೆ; ಶಂಕಿತ ಆರೋಪಿಗಳು ಪರಾರಿ

spot_img
- Advertisement -
- Advertisement -

ಉಪ್ಪಿನಂಗಡಿ: ನಿಡ್ಲೆ ಗ್ರಾಮದ ಬೂಡುಜಾಲಿನಲ್ಲಿ ಹಾಡಹಗಲೇ ನಾಲ್ವರು ಬೇಟೆಗಾರರ ತಂಡ ಭಾರೀ ಗಾತ್ರದ ಕಾಡುಕೋಣವನ್ನು ಕೊಂದು ಒಣ ಮಾಂಸವನ್ನಾಗಿ ಪರಿವರ್ತಿಸಿದ ಘಟನೆಯನ್ನು ಉಪ್ಪಿನಂಗಡಿ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿದೆ.

ಘಟನೆಯ ವಿವರ: ನಿಡ್ಲೆ ಗ್ರಾಮದ ಬೂಡುಜಾಲಿನ ಮೀಸಲು ಅರಣ್ಯದ ಅಂಚಿನಲ್ಲಿರುವ ತೋಟದಲ್ಲಿ ಅ. 11ರಂದು ಬೆಳಗ್ಗೆ ಕಾಡುಕೋಣ ವೊಂದನ್ನು ಗುಂಡಿಕ್ಕಿ ಕೊಂದು ಕಾಡಿನಲ್ಲೇ ಕತ್ತರಿಸಿ ಪಿಕ್‌ಅಪ್‌ ವಾಹನದ ಮೂಲಕ ಸಾಗಿಸಿದ್ದು, ಈ ಘಟನೆಯ ಮಾಹಿತಿಯನ್ನು ತಿಳಿದ ಪೊಲೀಸರು ಘಟನಾ ಸ್ಥಳಕ್ಕೆ ದಾಳಿ ನಡೆಸಲಾಗಿತ್ತು. ಬೂಡುಜಾಲು ಅರಣ್ಯ ಅಂಚಿನಲ್ಲಿ ಇರುವ ತೋಟಕ್ಕೆ ಬೃಹತ್‌ ಗಾತ್ರದ ಕಾಡುಕೋಣ ಬರುತ್ತಿತ್ತೆನ್ನಲಾಗಿದ್ದು, ಇದಕ್ಕಾಗಿ ಕಾದು ಕುಳಿತಿದ್ದ ಶಿಬಾಜೆ ಹಾಗೂ ಶಿರಾಡಿ ಪರಿಸರದವರನ್ನು ಒಳಗೊಂಡ ತಂಡ ಗುರುವಾರ ರಾತ್ರಿ ಬೇಟೆಯಾಡಿದೆ ಎಂದು ತಿಳಿದುಬಂದಿದೆ. ಗುಂಡೇಟು ತಿಂದ ಕಾಡುಕೋಣ ಓಡಿ ಹೋಗಿದ್ದು, ಮರುದಿನ ಕಾಡಿನಲ್ಲಿ ಹುಡುಕಾಡಿ ಅನತಿ ದೂರದಲ್ಲಿ ಗಾಯಗೊಂಡು ಬಿದ್ದಿದ್ದ ಕಾಡುಕೋಣವನ್ನು ಪತ್ತೆ ಹಚ್ಚಿ ಕೊಲ್ಲಲಾಗಿದೆ. ಕೊಂದ ಕಾಡುಕೋಣವನ್ನು ಅಲ್ಲೇ ತುಂಡು ಮಾಡಲಾಗಿ ಆರೋಪಿಗಳ ಪೈಕಿ ಓರ್ವನಾದ ರಾಜು ಮನೆಗೆ ಪಿಕ್‌ಅಪ್‌ ವಾಹನದಲ್ಲಿ ತಂದು ಅಲ್ಲಿ ಅದನ್ನು ಒಣ ಮಾಂಸವಾಗಿ ಪರಿವರ್ತಿಸಿ ಶೇಖರಿಸಿ ಇಡಲಾಗಿರುವುದನ್ನು ವಲಯ ಅರಣ್ಯಾಧಿಕಾರಿ ರಾಘವೇಂದ್ರ ರವರ ತಂಡ ಪತ್ತೆ ಹಚ್ಚಿದೆ.

ಈ ರೀತಿಯಾಗಿ ಒಣಗಿಸಿದ ಮಾಂಸ 1 ಕೆ.ಜಿ.ಗೆ 1,300 ರೂಪಾಯಿಯಿಂದ 1,500 ರೂಪಾಯಿ ತನಕ ಭಾರೀ ಬೇಡಿಕೆಯಲ್ಲಿ ಮಾರಾಟ ನಡೆಯುತ್ತದೆ. 3ರಿಂದ 5, 10 ಕೆ.ಜಿ.ಯ ಪ್ಯಾಕ್‌ ಮಾಡಿ ಕೇರಳ ಸಾಗಾಟ ಮಾಡಲಾಗುತ್ತಿದೆ.

ಮೀಸಲು ಅರಣ್ಯ ಪ್ರದೇಶದ ಅಂಚಿನಲ್ಲಿ ಇರುವ ನಿಡ್ಲೆ, ಶಿಬಾಜೆ, ಶಿರಾಡಿ ಪರಿಸರದಲ್ಲಿ ನಿರಂತರವಾಗಿ ಕಾಡು ಪ್ರಾಣಿಗಳ ಬೇಟೆಯಾಡುವ ತಂಡವೊಂದು ಕಾಡು ಪ್ರಾಣಿಗಳನ್ನು ಭೇಟಿಯಾಡಿ ಬಳಿಕ ಅದನ್ನು ಒಣ ಮಾಂಸವನ್ನಾಗಿ ಮಾಡಿ ಒಣಗಿಸುವ ಕೃತ್ಯದಲ್ಲಿ ಇಲ್ಲಿನ ತಂಡವೊಂದು ತೊಡಗಿಸಿಕೊಂಡಿದೆ ಎಂದು ಹೇಳಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಆರೋಪಿಗಳೆಲ್ಲರೂ ಪರಾರಿಯಾಗಿದ್ದು, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳಿಂದ ತನಿಖೆ ನಡೆಯುತ್ತಿದೆ.

- Advertisement -
spot_img

Latest News

error: Content is protected !!