- Advertisement -
![]()
- Advertisement -
ಬೆಳ್ತಂಗಡಿ: ಅ ತೋಟದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆಯಾಗಿರುವ ಘಟನೆ ಅಳದಂಗಡಿಯಲ್ಲಿ ನಡೆದದೆ.
ಅಳದಂಗಡಿ ವೀರೇಂದ್ರ ಜೈನ್ ಎಂಬವರ ತೋಟದಲ್ಲಿ ಸುಮಾರು 13 ಅಡಿ ಉದ್ದದ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆಯಾಗಿದೆ. ಇದನ್ನು ಗಮನಿಸಿದ ಮನೆಯವರು ತಕ್ಷಣ ಲಾಯಿಲದ ಉರಗ ಸಂರಕ್ಷಕ ಸ್ನೇಕ್ ಅಶೋಕ್ ಕುಮಾರ್ ಅವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಆಗಮಿಸಿದ ಸ್ನೇಕ್ ಅಶೋಕ್ ಕುಮಾರ್ ಸಾಹಸಮಯವಾಗಿ ಕಾಳಿಂಗ ಸರ್ಪವನ್ನು ಸೆರೆ ಹಿಡಿದು , ಸಂರಕ್ಷಿಸಿ , ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.
- Advertisement -


