- Advertisement -
- Advertisement -
ನವದೆಹಲಿ: ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಇಂದು ಕಾರ್ಯಾರಂಭ ಮಾಡಿರುವ ನರೇಂದ್ರ ಮೋದಿ ಮೊದಲ ದಿನವೇ ರೈತರಿಗೆ ಭರ್ಜರಿ ಕೊಡುಗೆ ನೀಡಿದ್ದಾರೆ.
ಪ್ರಧಾನ ಮಂತ್ರಿ ಕಚೇರಿಯಲ್ಲಿ ಇಂದು ರೈತರ ಖಾತೆಗಳಿಗೆ ಕಿಸಾನ್ ಸಮ್ಮಾನ್ ನಿಧಿಯ ಹದಿನೇಳನೇ ಕಂತು ಪಾವತಿಯ ಆದೇಶಕ್ಕೆ ನರೇಂದ್ರ ಮೋದಿ ಸಹಿ ಹಾಕಿದ್ದಾರೆ.
9.3. ಕೋಟಿ ರೈತರ ಖಾತೆಗಳಿಗೆ ಒಟ್ಟು 20,000 ಕೋಟಿ ರೂಪಾಯಿ ಜಮೆ ಮಾಡಲಾಗಿದೆ. ದೇಶದ ಬಡ ಮತ್ತು ಸಣ್ಣ ಸಾಗುವಳಿದಾರರಿಗೆ ಕೇಂದ್ರ ಸರ್ಕಾರದಿಂದ ಆರು ಸಾವಿರ ರೂಪಾಯಿ ಕಿಸಾನ್ ಸಮ್ಮಾನ್ ಯೋಜನೆಯಡಿ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ.
ಇಂದು ಬೆಳಗ್ಗೆ ಪ್ರಧಾನಿ ಕಚೇರಿಗೆ ಆಗಮಿಸಿದ ನರೇಂದ್ರ ಮೋದಿ ಅವರನ್ನು ಕಚೇರಿ ಸಿಬ್ಬಂದಿ ಸಾಲಾಗಿ ನಿಂತು ಚಪ್ಪಾಳೆ ತಟ್ಟಿ ಸ್ವಾಗತಿಸಿದ್ದರು
- Advertisement -