Wednesday, June 3, 2026
Homeತಾಜಾ ಸುದ್ದಿಇಂದು ರೈತರ ಖಾತೆ ಸೇರಲಿದೆ ಕಿಸಾನ್ ಸಮ್ಮಾನ್ ನಿಧಿ  ಯೋಜನೆಯ 12ನೇ ಕಂತಿನ ಹಣ

ಇಂದು ರೈತರ ಖಾತೆ ಸೇರಲಿದೆ ಕಿಸಾನ್ ಸಮ್ಮಾನ್ ನಿಧಿ  ಯೋಜನೆಯ 12ನೇ ಕಂತಿನ ಹಣ

- Advertisement -
- Advertisement -

ನವದೆಹಲಿ: ಇಂದು ರೈತರಿಗೆ ಗುಡ್ ನ್ಯೂಸ್ ಕಾದಿದೆ.  ಪ್ರಧಾನಿ ನರೇಂದ್ರ ಮೋದಿ ಅವರು ಕಿಸಾನ್ ಸಮ್ಮಾನ್ ನಿಧಿ  ಯೋಜನೆಯಡಿ 12ನೇ ಕಂತಿನ ಹಣವನ್ನು ರೈತರಿಗೆ ಬಿಡುಗಡೆ ಮಾಡಲಿದ್ದಾರೆ.

ಇಂದು ಸುಮಾರು 10 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ₹ 16,000 ಕೋಟಿ ರೂ.ಗಳನ್ನು ಜಮಾ ಮಾಡಲಾಗುತ್ತದೆ. ಈ ಬಗ್ಗೆ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ದೆಹಲಿಯಲ್ಲಿ ಇಂದು ನಡೆಯುವ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ‘ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನ 2022’ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಂತು ಮೊತ್ತವನ್ನು ಬಿಡುಗಡೆ ಮಾಡಲಿದ್ದಾರೆ.

- Advertisement -

Latest News

error: Content is protected !!