- Advertisement -
- Advertisement -
ಉಡುಪಿ : ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ಹಾಡಹಗಲೇ ಕಿಶನ್ ಹೆಗ್ಡೆಯನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈದ ಐವರು ಹಂತಕರನ್ನು ಬ್ರಹ್ಮಾವರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ನೇತೃತ್ವದ ತಂಡ ಬಂಧಿಸಿದೆ. ಇದೀಗ ಪೊಲೀಸರು ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ.
ಅಂದ್ಹಾಗೆ ಕಿಶನ್ ಹೆಗ್ಡೆ ಕೊಲೆಯ ಪ್ರಮುಖ ಆರೋಪಿ ಮನೋಜ್ ಎಂದು ತನಿಖೆ ವೇಳೆ ತಿಳಿದು ಬಂದಿದೆ. ಹಣದ ವ್ಯವಹಾರದ ಮನಸ್ತಾಪದಿಂದ ಕೊಲೆ ನಡೆದಿರಬಹುದು ಎಂದು ಹೇಳಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿರಿಯಡ್ಕ ಠಾಣೆಯ ಅಧಿಕಾರಿ ಸುಧಾಕರ್ ತೋನ್ಸೆ ಹಾಗೂ ಸರ್ಕಲ್ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರ ನೇತೃತ್ವದ ತಂಡ ತನಿಖೆ ನಡೆಸುತ್ತಿದೆ.
- Advertisement -