Tuesday, May 7, 2024
Homeತಾಜಾ ಸುದ್ದಿಕೊಡಗಿನಲ್ಲಿ ಒಂದೇ ಕುಟುಂಬದ ಮೂವರಿಗೆ ಚೂರಿ ಇರಿತ

ಕೊಡಗಿನಲ್ಲಿ ಒಂದೇ ಕುಟುಂಬದ ಮೂವರಿಗೆ ಚೂರಿ ಇರಿತ

spot_img
- Advertisement -
- Advertisement -

ಕೊಡಗು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಮೂವರಿಗೆ ವ್ಯಕ್ತಿಯೊಬ್ಬ ಚೂರಿಯಿಂದ ಇರಿದ ಘಟನೆ ವೀರಾಜಪೇಟೆ ತಾಲೂಕಿನ ಕರಡಿಗೋಡು ಗ್ರಾಮದಲ್ಲಿ ನಡೆದಿದೆ. ವಿಲ್ಸನ್​ (45), ಸ್ಟೀವನ್​(28), ಮತ್ತು ತರುಣಿ(17) ಚಾಕು ಇರಿತಕ್ಕೊಳಗಾದವರು.

ಅದೇ ಗ್ರಾಮದ ನಿವಾಸಿ ರಾಮ್​ದಾಸ್​ ಎಂಬಾತ ಈ ಕೃತ್ಯ ನಡೆದಿದ್ದಾನೆ. ಗ್ರಾಮಸ್ಥರು ಗಾಯಾಳುಗಳನ್ನು ಸಿದ್ದಾಪುರ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಅಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಅವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಈ ಸಂಬಂಧ ಸಿದ್ದಾಪುರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.

- Advertisement -
spot_img

Latest News

error: Content is protected !!