Monday, April 29, 2024
Homeತಾಜಾ ಸುದ್ದಿಬಂಟ್ವಾಳ: ಕ್ಷುಲ್ಲಕ ಕಾರಣಕ್ಕೆ ಚೂರಿ ಇರಿತ ಪ್ರಕರಣ- ಇಬ್ಬರು ಆರೋಪಿಗಳು ಅರೆಸ್ಟ್

ಬಂಟ್ವಾಳ: ಕ್ಷುಲ್ಲಕ ಕಾರಣಕ್ಕೆ ಚೂರಿ ಇರಿತ ಪ್ರಕರಣ- ಇಬ್ಬರು ಆರೋಪಿಗಳು ಅರೆಸ್ಟ್

spot_img
- Advertisement -
- Advertisement -

ಬಂಟ್ವಾಳ: ಬಾರೊಂದರಲ್ಲಿ ಕುಡಿದು ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡು ಚೂರಿ ಇರಿತ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದು ಉಳಿದ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾವಳಮೂಡೂರು ನಿವಾಸಿ ಪುರುಷ ಯಾನೆ ಪುರುಷೋತ್ತಮ ಹಾಗೂ ಬಿ.ಕಸಬಾ ನಿವಾಸಿ ಧನುಷ್ ಯಾನೆ ಧನಂಜಯ ಎಂದು ಗುರುತಿಸಲಾಗಿದೆ.

ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿ ಫೆ. 9ರಂದು ಯಾವುದೋ ಕ್ಷುಲಕ ಕಾರಣಕ್ಕೆ ಯುವಕರ ಮಧ್ಯೆ ಜಗಳ ನಡೆದಿದ್ದು, ಈ ವೇಳೆ ಚೂರಿಯಿಂದ ಇರಿದುಕೊಂಡಿದ್ದಾರೆ. ಇರಿತದ ಪರಿಣಾಮ ಕಿಶೋರ್ ಹಾಗೂ ದಯಾನಂದ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರಕರಣದ ಆರೋಪಿಗಳಾದ ಅರ್ಬಿಗುಡ್ಡೆ ನಿವಾಸಿಗಳಾದ ಸುಚಿತ್, ಸಚಿನ್, ಧನು ಹಾಗೂ ಪುರುಷ ವಿರುದ್ಧ ಪ್ರಕರಣ ದಾಖಲಾಗಿತ್ತು. ಅವರ ಪತ್ತೆಗಾಗಿ ಎಸ್.ಪಿ.ಹೃಷಿಕೇಶ್ ಸೋನಾವಣೆ ನಿರ್ದೇಶನದಂತೆ ಬಂಟ್ವಾಳ ಡಿ.ವೈ.ಎಸ್.ಪಿ.ಪ್ರತಾಪ್ ಸಿಂಗ್ ಥೋರಾಟ್ ಅವರ ಮಾರ್ಗದರ್ಶನ ದಲ್ಲಿ ಬಂಟ್ವಾಳ ನಗರ ಪೊಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ ನೇತ್ರತ್ವದ ತಂಡ ರಚನೆ ಮಾಡಿದ್ದರು.

ಇನ್ನು ನಗರ ಠಾಣಾ ಪೋಲೀಸ್ ಇನ್ಸ್ಪೆಕ್ಟರ್ ವಿವೇಕಾನಂದ ನೇತ್ರತ್ವದ ಎಸ್.ಐ.ಅವಿನಾಶ್ ಅವರ ತಂಡ ಆರೋಪಿಗಳಿಬ್ಬರನ್ನು ಬಂಧಿಸಿದ್ದು ಉಳಿದ ಆರೋಪಿಗಳಿಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ.

- Advertisement -
spot_img

Latest News

error: Content is protected !!