Sunday, May 19, 2024
Homeಆರಾಧನಾದೇರಾಜೆ ಬೆಟ್ಟ ಶ್ರೀ ದೈವ ಕೊಡಮಣಿತ್ತಾಯ ದೈವಗಳ ಪುನರ್ ಪ್ರತಿಷ್ಠೆ- ಬ್ರಹ್ಮ ಕುಂಭಾಭಿಷೇಕ ಹಾಗೂ ನೇಮೋತ್ಸವ

ದೇರಾಜೆ ಬೆಟ್ಟ ಶ್ರೀ ದೈವ ಕೊಡಮಣಿತ್ತಾಯ ದೈವಗಳ ಪುನರ್ ಪ್ರತಿಷ್ಠೆ- ಬ್ರಹ್ಮ ಕುಂಭಾಭಿಷೇಕ ಹಾಗೂ ನೇಮೋತ್ಸವ

spot_img
- Advertisement -
- Advertisement -

ಬೆಳ್ತಂಗಡಿ: ದೇರಾಜೆ ಬೆಟ್ಟ(ಗುಡ್ಡೆ) ಶ್ರೀ ದೈವ ಕೊಡಮಣಿತ್ತಾಯ ದೈವಸ್ಥಾನ ಸುಮಾರು 800ವರ್ಷಗಳ ಇತಿಹಾಸ ಹೊಂದಿದ್ದು 250ವರ್ಷಗಳ ಹಿಂದೆ ಪಾಳು ಬಿದ್ದಿದ್ದು 38ವರ್ಷಗಳ ಹಿಂದೆ ಇಲ್ಲಿ ನೇಮೋತ್ಸವ ನಡೆಸಿರುವ ವಿಚಾರ ಊರ ಕೆಲವು ಹಿರಿಯರಿಗೆ ತಿಳಿದುಬರುತ್ತದೆ. ಕ್ಷೇತ್ರವನ್ನು ಜೀಣೋದ್ಧಾರಗೊಳಿಸುವ ಸಂಕಲ್ಪದೊಂದಿಗೆ ಕ್ಷೇತ್ರಕ್ಕೆ ಸಂಭಂದಪಟ್ಟ ಅಳದಂಗಡಿ ಅರಮನೆಯ ತಿಮ್ಮ ಅರಸರಾದ ಡಾ| ಪದ್ಮಪ್ರಸಾದ್ ಅಜಿಲರ ಮಾರ್ಗದರ್ಶನದೊಂದಿಗೆ 1999, 2014, ಹಾಗೂ 2017ರಲ್ಲಿ ಪ್ರಶ್ನಾಚಿಂತನೆ ನಡೆಸಿದಾಗ ಕ್ಷೇತ್ರವನ್ನು ಜೀಣೋದ್ಧಾರಗೊಳಿಸಬೇಕೆಂದು ತಿಳಿದುಬಂದಿದ್ದು ಅದರಂತೆ ದೇರಾಜೆ ಬೆಟ್ಟ ಶ್ರೀ ದೈವ ಕೊಡಮಣಿತ್ತಾಯ ದೈವಗಳ ಪುನರ್ ಪ್ರತಿಷ್ಠೆ, 108ಕಲಶ ಸಹಿತ ಬ್ರಹ್ಮ ಕುಂಭಾಭಿಷೇಕ ಹಾಗೂ ನೇಮೋತ್ಸವ ಫೆ.19 ಮತ್ತು ಫೆ.20ರವರೆಗೆ ನಡೆಯಲಿದೆ ಎಂದು ಬ್ರಹ್ಮ ಕುಂಭಾಭಿಷೇಕ ಸಮಿತಿ ಅಧ್ಯಕ್ಷ ಕೆ. ಹೇಮರಾಜ್ ಬೆಳ್ಳಿಬೀಡು ಹೇಳಿದ್ದಾರೆ.

ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಫೆ.19ರಂದು ಬೆಳಿಗ್ಗೆ 8 ಗಂಟೆಯಿಂದ ದೇವತಾ ಪ್ರಾರ್ಥನೆ, ತೋರಣ ಮಹೂರ್ತ, ಉಗ್ರಾಣ ಮಹೂರ್ತ, ಹೊರಕಾಣಿಕೆ ಸಮರ್ಪಣೆ, ಪುಣ್ಯಹಾವಾಹನ, ಗಣಯಾಗ, ನವಗ್ರಹ ಶಾಂತಿ, 11ಗಂಟೆಯಿಂದ ಮರೋಡಿ ಶಾಂತಿನಗರ ಅರುಣೋದಯ ಮಂದಿರದಿದಿಂದ ಹೊರಕಾಣಿಕೆ ಮೆರವಣಿಗೆ, ಸಂಜೆ 4ಗಂಟೆಯಿಂದ ಪುಣ್ಯಾ ವಾಚನ, ಸಪ್ತಶುದ್ಧಿ, ಪ್ರಸಾದ ಶುದ್ಧಿ, ವಾಸ್ತು ಪೂಜೆ, ವಾಸ್ತು ಬಲಿ, ವಾಸ್ತು ಹೋಮ, ರಾಕ್ಷೆಯಘ್ನ ಹೋಮ, ಪ್ರಾಕಾರ ಬಲಿ, ದಿಶಾ ಹೋಮ, ಮಂಚಾದಿವಾಸ, ಕಲಶಾಧಿವಾಸ, ಅಧಿವಾಸ ಹೋಮ ನಡೆಯಲಿದೆ.

ಫೆ.20ರಂದು ಬೆಳಿಗ್ಗೆ 7ರಿಂದ ಪುಣಾಹ ವಾಚನ, 8.30ಕ್ಕೆ ಶ್ರೀ ದೈವ ಹಾಗೂ ಕೊಡಮಣಿತ್ತಯ ದೈವಗಳ ಮಂಚಪ್ರತಿಷ್ಠಾಪನೆ, ಕಲಶಾಭಿಷೇಕ ಪರ್ವ ಸಂಕ್ರಾಂತಿ, ದರ್ಶನ, ಸಂಜೆ 6ಗಂಟೆಗೆ ದೈವದ ಭಂಡಾರ ಉಚ್ಚೂರು ಮನೆಯಿಂದ ಹಾಗೂ ಶ್ರೀ ಕೊಡಮಣಿತ್ತಾಯ ಪಾಂಡಿಬೆಟ್ಟು ಗುತ್ತು ಮನೆಯಿಂದ ಹೊರಟು ಸಂಜೆ 7ಗಂಟೆಗೆ ದೇರಾಜೆಬೆಟ್ಟ ಏರುವುದು, ರಾತ್ರಿ 9ರಿಂದ ಶ್ರೀದೈವ ಕೊಡಮಣಿತ್ತಾಯ ದೈವಗಳ ನೇಮೋತ್ಸವ ನಡೆಯಲಿದೆ ಎಂದರು.

ಬೆಳಿಗ್ಗೆ 11.30ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು ಅಳದಂಗಡಿ ಅರಮನೆಯ ಪದ್ಮಪ್ರಸಾದ್ ಅಜಿಲ ಅಧ್ಯಕ್ಷತೆ ವಹಿಸಲಿದ್ದಾರೆ ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜಾ, ವಿಧಾಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಎಂ ಮೋಹನ್ ಆಳ್ವಾ, ದ.ಕ ಜಿಲ್ಲೆ ಧಾರ್ಮಿಕ ಪರಿಷತ್‌ನ ಸದಸ್ಯ, ಕೊಕ್ರಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ , ಮರೋಡಿ ಗ್ರಾ.ಪಂ ಅಧ್ಯಕ್ಷೆ ಪದ್ಮಶ್ರೀ ಜೈನ್, ಹಾಗೂ ರೂ.50,೦೦೦ ಮೇಲ್ಪಟ್ಟು ಧನಸಹಾಯ ನೀಡಿದವರು ಉಪಸ್ಥಿತರಿರಲಿದ್ದಾರೆ ಎಂದರು.

ರಾತ್ರಿ 8ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಬ್ರಹ್ಮ ಕುಂಭಾಭಿಷೇಕ ಸಮಿತಿ ಅಧ್ಯಕ್ಷ ಕೆ. ಹೇಮರಾಜ್ ಬೆಳ್ಳಿಬೀಡು ಅಧ್ಯಕ್ಷತೆ ವಹಿಸಲಿದ್ದು ಶ್ರೀಕ್ಷೇತ್ರ ಕಟೀಲಿನ ಪ್ರಧಾನ ಅರ್ಚಕ ವೇ|ಮೂ| ಅನಂತ ಪದ್ಮನಾಭ ಅಸ್ರಣ್ಣರು ಆಶಿರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಬೆಸ್ಟ್ ಫೌಂಡೇಷನ್‌ನ ಅಧ್ಯಕ್ಷ ರಕ್ಷಿತ್ ಶಿವರಾಂ, ಅಳಗಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ ಅಳದಂಗಡಿ ಅರಮನೆ ಮೊದಲಾದವರು ಭಾಗವಹಿಸಿದ್ದಾರೆ ಎಂದರು.

ಗೋಷ್ಠಿಯಲ್ಲಿ ಬ್ರಹ್ಮಕುಂಭಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ನಾರಾಯಣ ಪೂಜಾರಿ, ಆದಿತ್ಯ ಪಿ.ಕೆ ಮತ್ತೊಟ್ಟು, ಜಿನೇಂದ್ರ ಜೈನ್ ಹರಂಬೆಟ್ಟು ಗುತ್ತು, ಜಯವರ್ಮ ಬುಣ್ಣು ಕುಕ್ಕೆರಬೆಟ್ಟು, ಗುರಿಕಾರರಾದ ಸುರೇಂದ್ರ ಬಲ್ಲಾಳ್ ಮಲ್ಲಾರ ಬೀಡು, ಉಲ್ಲಾಸ್ ಪೂಜಾರಿ ಸುರಭಿ ಉಚ್ಚೂರು, ಯೋಗೇಂದ್ರ ಆಚಾರ್ಯ ಹಾಗೂ ವಿವಿಧ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!