ವಿಟ್ಲ: ದ.ಕ.ಜಿ.ಪಂಚಾಯತ್ ಉನ್ನತೀಕರಿಸಿದ ಶಾಲೆ ಕೋಡಪದವಿನಲ್ಲಿ ಆಹಾರ ಸಾಮಾಗ್ರಿಗಳ ದಾಸ್ತಾನು ಕೊಠಡಿ ಮತ್ತು ಮುಖ್ಯ ಶಿಕ್ಷಕರ ಕೊಠಡಿಯ ಬೀಗ ಮುರಿದ ಕಳ್ಳರು ಸೊತ್ತುಗಳಿಗಾಗಿ ಜಾಲಾಡಿದ ಘಟನೆ ನಡೆದಿದೆ.
ದಾಸ್ತಾನು ಕೊಠಡಿಯಲ್ಲಿ ಆಹಾರ ಸಾಮಾಗ್ರಿಗಳು ಕಂಡು ಬಂದಿದ್ದರಿಂದ, ಮುಖ್ಯಶಿಕ್ಷಕರ ಕೊಠಡಿಯೊಳಗೂ ಕಳ್ಳರು ನುಗ್ಗಿದ್ದಾರೆ ಎನ್ನಲಾಗಿದೆ. ಮುಂದಿನ ತಿಂಗಳು ಉದ್ಘಾಟನೆಗೊಳ್ಳಲಿರುವ ಎರಡು ನೂತನ ಕೊಠಡಿಗಳಿಗೆ ಶಾಲಾ ಹಿತೈಷಿಗಳು, ದಾನಿಗಳು ನೀಡಿರುವ ಬೆಲೆಬಾಳುವ ವಸ್ತುಗಳು, ಟಿ.ವಿ.,ಕಂಪ್ಯೂಟರ್ ಗಳನ್ನು ಕಳವಿಗೆ ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ವಾಹನಗಳ ಶಬ್ಧ ಕೇಳಿಸಿಕೊಂಡ ಕಳ್ಳರು ಸೊತ್ತುಗಳನ್ನು ಚೆಲ್ಲಾಪಿಲ್ಲಿಯಾಗಿ ಅಲ್ಲೇ ಬಿಟ್ಟು ಕಾಲ್ಕಿತ್ತಿರುವುದು ಕಂಡುಬಂದಿದೆ.
ಕಳವು ಯತ್ನ ಪ್ರಕರಣದ ಬಗ್ಗೆ ಸೋಮವಾರ ಬೆಳಿಗ್ಗೆ ಮುಖ್ಯಶಿಕ್ಷಕಿ ಮೋಹಲತಾ ಟೀಚರ್ ಅವರ ಗಮನಕ್ಕೆ ಬಂದಿದ್ದು, ತಕ್ಷಣ ಎಸ್.ಡಿ.ಎಂ.ಸಿ ಅಧ್ಯಕ್ಷರ ಮೂಲಕ 112 ಪೊಲೀಸರಿಗೆ ಮಾಹಿತಿ ತಿಳಿಸಿ ನಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ವಿಟ್ಲ ಪೋಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ವಿದ್ಯಾ ಸಹಿತ ಪೊಲೀಸರ ಭೇಟಿ, ಸ್ಥಳ ಪರಿಶೀಲನೆ ನಡೆಸಿ ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷ ಟೆಕ್ನಿಕ್ ಫಾರೂಕ್, ಸ್ಥಳೀಯ ಗ್ರಾ.ಪಂ.ಸದಸ್ಯ ಅರ್ಶದ್ ಕುಕ್ಕಿಲ, ಹಳೆ ವಿದ್ಯಾರ್ಥಿ ಸಂಘದ ಹಸೈನಾರ್ ತಾಳಿತ್ತನೂಜಿ, ಪಾರೂಕ್ ಬೊಣ್ಯಕುಕ್ಕು, ಮುಖ್ಯ ಶಿಕ್ಷಕರಾದ ಮೋಹಲತಾ ಉಪಸ್ಥಿತರಿದ್ದರು.