- Advertisement -
- Advertisement -
ಬೆಳ್ತಂಗಡಿ; ಇಂದು ಬೆಳಗ್ಗೆ ವೇಣೂರಿನ ಬಾಡಾರಿನ ಕೊರಗಕಲ್ಲು ಬಳಿಯ ಕೊರಗಜ್ಜ ಕಟ್ಟೆಯಲ್ಲಿ ಕೊರಗಜ್ಜನ ಕಟ್ಟೆಗೆ ಬೆಂಕಿ ಇಡಲಾಗಿತ್ತು.ಇದೀಗ ಆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಸ್ಥಳದಲ್ಲಿ 300 ಕ್ಕೂ ಹೆಚ್ಚು ಜನ ಸೇರಿದ್ದು, ತನಿಖೆಗೆ ಆಗ್ರಹಿಸಿದ್ದಾರೆ.ಸ್ಥಳಕ್ಕೆ ವೇಣೂರು ಪೊಲೀಸರು ಹಾಗೂ ಬೆಳ್ತಂಗಡಿ ತಹಶೀಲ್ದಾರ್ ದೌಡಯಿಸಿದ್ದಾರೆ. ಇಂದು ಬೆಳಗ್ಗೆ ಪಕ್ಕದ ಮನೆಯ ಹರೀಶ್ ಎಂಬಾತ ಕಟ್ಟೆಗೆ ಬೆಂಕಿ ಹಾಕಿದ್ದ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಹರೀಶ್ ಮೇಲೆ ಪ್ರಕರಣ ದಾಖಲಾಗಿತ್ತು.
ಸದ್ಯ ಬೆಳ್ತಂಗಡಿ ತಹಶಿಲ್ದಾರ್ ಸುರೇಶ್ ಕುಮಾರ್ ಸ್ಥಳದಲ್ಲಿ ಮುಂದಿನ ಆದೇಶದವರೆಗೂ 144 ಸೆಕ್ಷನ್ ಜಾರಿ ಮಾಡಿ ಆದೇಶ ಮಾಡಿದ್ದಾರೆ.
- Advertisement -