Saturday, May 18, 2024
Homeತಾಜಾ ಸುದ್ದಿಜಮೀನು ಸರ್ವೇ ಮಾಡಲು ಬಂದ ತಹಶೀಲ್ದಾರ್​ ರನ್ನು ಹತ್ಯೆ ಮಾಡಿದ ನಿವೃತ್ತ ಶಿಕ್ಷಕ

ಜಮೀನು ಸರ್ವೇ ಮಾಡಲು ಬಂದ ತಹಶೀಲ್ದಾರ್​ ರನ್ನು ಹತ್ಯೆ ಮಾಡಿದ ನಿವೃತ್ತ ಶಿಕ್ಷಕ

spot_img
- Advertisement -
- Advertisement -

ಕೋಲಾರ: ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರ್ ಗೆ ನಿವೃತ್ತ ಶಿಕ್ಷಕರೊಬ್ಬರು ಚಾಕುವಿನಿಂದ ಇರಿದಿದ್ದು, ತಹಶೀಲ್ದಾರ್ ರನ್ನು ಹತ್ಯೆ ಮಾಡಿದ್ದಾರೆ.

ಇಂದು ಬಂಗಾರಪೇಟೆ ತಾಲೂಕಿನ ಕಳವಂಚಿ ಗ್ರಾಮದಲ್ಲಿ ಸರ್ವೇ ನಡೆಸಲು ತಹಶೀಲ್ದಾರ್ ಚಂದ್ರಮೌಳೇಶ್ವರ್ ಕಳವಂಚಿ ಗ್ರಾಮಕ್ಕೆ ಹೋಗಿದ್ದರು. ಈ ಸಂದರ್ಭ ನಿವೃತ್ತ ಶಿಕ್ಷಕ ವೆಂಕಟಪತಿ ಎಂಬ ವ್ಯಕ್ತಿ ಚೂರಿಯಿಂದ ತಹಶೀಲ್ದಾರ್ ಗೆ ಇರಿದಿದ್ದಾರೆ.

ರಾಮಮೂರ್ತಿ ಹಾಗೂ ಆರೋಪಿ ವೆಂಕಟಪತಿ ಎಂಬುವರ ನಡುವೆ ಜಮೀನು ವ್ಯಾಜ್ಯವಿದ್ದು, ಈ ಜಗದ ಸರ್ವೇ ನಡೆಸಿದ ತಹಶೀಲ್ದಾರ್ ಅವರು ವೆಂಕಟಪತಿ ಜಮೀನಿನಲ್ಲಿ ಕಲ್ಲು ಊಳಿಸಿದ್ದಾರೆ. ಇದಕ್ಕೆ ಕೋಪಗೊಂಡ ವೆಂಕಟಪತಿ ಏಕಾಏಕಿ ತಹಶೀಲ್ದಾರ್ ಎದೆ ಭಾಗಕ್ಕೆ ಚಾಕು ಇರಿದು ಸ್ಥಳದಿಂದ ಪರಾರಿಯಾಗಿದ್ದಾರೆ.

ತಹಶೀಲ್ದಾರ್ ಅವರಿಗೆ ತೀವ್ರ ರಕ್ತ ಸ್ರಾವವಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

- Advertisement -
spot_img

Latest News

error: Content is protected !!