- Advertisement -
- Advertisement -
ಬೆಂಗಳೂರು: ಕರಾವಳಿಯ ಮೂವರು ಶಾಸಕರಿಗೆ ಸಚಿವ ಸ್ಥಾನ ಕನ್ಫರ್ಮ್ ಆಗಿದೆ, ಮಾಜಿ ಸಚಿವ, ಕೋಟ ಶ್ರೀನಿವಾಸ ಪೂಜಾರಿ ಅವರಿಗೂ ಸಚಿವ ಸ್ಥಾನ ಗ್ಯಾರಂಟಿ ಆಗಿದೆ. ರಾಜ್ಯ ಸರ್ಕಾರದ ನೂತನ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವ ಆಹ್ವಾನ ಧೃಡೀಕರಣಗೊಳ್ಳುತ್ತಲೇ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಲ್ಲೇಶ್ವರಂ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನಕ್ಕೆ ಆಗಮಿಸಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀಯುತ ನಳೀನ್ ಕುಮಾರ ರವರಿಗೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಮಟ್ಟಾರು ರತ್ನಾಕರ ಹೆಗ್ಡೆ, ಸತೀಶ ಕುಂಪಲ ಉಪಸ್ಥಿತರಿದ್ದರು.
- Advertisement -