- Advertisement -
- Advertisement -
ಉಡುಪಿ : ಜಿಲ್ಲೆಯಲ್ಲಿಂದು ಕೋಟಿ-ಚೆನ್ನಯ ಸೇನಾ ಪೂರ್ವ ತರಬೇತಿ ಸಂಸ್ಥೆ ಉದ್ಘಾಟನೆಗೊಂಡಿತು. ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಗ್ನಿಪಥಕ್ಕೆ ಪೂರಕವಾಗಿ ಸೇನಾ ಆಯ್ಕೆ ತರಬೇತಿ ಸಂಸ್ಥೆಯನ್ನು ಕೋಟಾ ಶ್ರೀನಿವಾಸ್ ಪೂಜಾರಿ ಅಧಿಕೃತವಾಗಿ ಉದ್ಘಾಟಿಸಿದ್ರು.
ಉಡುಪಿಯ ಹೋಟೆಲ್ ಕಿದಿಯೂರಿನ ಸೇಷಶಯನ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ತರಬೇತಿ ಸಂಸ್ಥೆಯಲ್ಲಿ ನೂರು ಜನ ಯುವಕರನ್ನು ಆಯ್ಕೆ ಮಾಡಿಕೊಂಡು ಸೇನಾಪೂರ್ವ ತರಬೇತಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೀಡಲಿದ್ದು, ಮುಂದಿನ ಅಗ್ನಿಪಥಕ್ಕೆ ಅರ್ಜಿ ಆಹ್ವಾನಿಸಿದಾಗ ಈ ನಾಲ್ಕು ತಿಂಗಳ ತರಬೇತಿ ಹೊಂದಿದ ಯುವಕರು ಬಹುತೇಕ ಮಂದಿ ಆಯ್ಕೆಯಾಗುವಂತಹ ಅವಕಾಶಗಳನ್ನು ಕಲ್ಪಿಸಲಾಗಿದೆ.
- Advertisement -