- Advertisement -
- Advertisement -
ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ ಪಿಎಸ್ಐ-1 ಪವನ್ ಕುಮಾರ್ ಅವರು ವರ್ಗಾವಣೆ ಅಗಿದ್ದ ಜಾಗಕ್ಕೆ ಹೊಸ ಪಿಎಸ್ಐ ಅಗಿ ಕೃಷ್ಣಕಾಂತ್ ಅಯ್ಯಪ್ಪ ಪಾಟೀಲ್ ಆಗಮಿಸಿದ್ದು, ಅಧಿಕಾರ ಸ್ವೀಕರಿಸಿದ್ದಾರೆ.
ಕೃಷ್ಣಕಾಂತ್ ಅಯ್ಯಪ್ಪ ಪಾಟೀಲ್ ಅವರು ವೇಣೂರು, ಬಂಟ್ವಾಳ , ವಿಟ್ಲ ಪೊಲೀಸ್ ಠಾಣೆಯಲ್ಲಿ (ಪ್ರೊಫೆಷನರಿ) ಪಿಎಸ್ಐ ಅಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬಾಗಲಕೋಟೆ ಜಿಲ್ಲೆಯ ಜಮಖಂಡಿಯವರಾಗಿರುವ ಕೃಷ್ಣಕಾಂತ್ ಅಯ್ಯಪ್ಪ ಪಾಟೀಲ್, ಇಂದು ರಾತ್ರಿ 9 ಗಂಟೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪಿಎಸ್ಐ-2 ಚಂದ್ರಶೇಖರ್ ಅವರಿಂದ ಅಧಿಕಾರ ಸ್ವೀಕರಿಸಿದ್ರು.
ಈ ವೇಳೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಿಬ್ಬಂದಿ ವರ್ಗದವರು ಹೂಗುಚ್ಚ ನೀಡಿ ಸ್ವಾಗತಿಸಿದರು.
- Advertisement -