Sunday, May 5, 2024
Homeತಾಜಾ ಸುದ್ದಿನಾಳೆ ಸಾರಿಗೆ ನೌಕರರ ಮುಷ್ಕರ; ರಾಜ್ಯದಾದ್ಯಂತ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ನಾಳೆ ಸಾರಿಗೆ ನೌಕರರ ಮುಷ್ಕರ; ರಾಜ್ಯದಾದ್ಯಂತ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

spot_img
- Advertisement -
- Advertisement -

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಕೆಗಾಗಿ ಒತ್ತಾಯಿಸಿ ನಾಳೆ ಸಾರಿಗೆ ನೌಕರರು ರಾಜ್ಯದಾದ್ಯಂತ ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದ್ದಾರೆ.  ಈ ಹಿನ್ನೆಲೆಯಲ್ಲಿ ನಾಳೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

6 ವರ್ಷಗಳು ಕಳೆದರೂ ಸಾರಿಗೆ ನೌಕರರಿಗೆ ಸರ್ಕಾರ ವೇತನ ಹೆಚ್ಚಳ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ರಾಜ್ಯ ಸಾರಿಗೆ ನೌಕರರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಅದರಂತೆ ಜನವರಿ 24ರಂದು ಅಂದರೆ ನಾಳೆ ಸಾರಿಗೆ ನೌಕರರು ಸರ್ಕಾರದ ಗಮನ ಸೆಳೆಯಲು ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ. ಹೀಗಾಗಿ ಮಂಗಳವಾರ ರಾಜ್ಯಾದ್ಯಂತ ಬಸ್ ಸಂಚಾರ ವ್ಯತ್ಯಯ ಸಾಧ್ಯತೆಯಿದೆ.

- Advertisement -
spot_img

Latest News

error: Content is protected !!