- Advertisement -
- Advertisement -
ಬೆಂಗಳೂರು; ನಾಳೆ 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಸರ್ಕಾರಿ ನೌಕರರು ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ.ಹಾಗಾಗಿ ನಾಳೆ ಕೆಎಸ್ ಆರ್ ಟಿಸಿ ಬಸ್ ಗಳು ರಸ್ತೆಗೆ ಇಳಿಯುತ್ತವೆಯೇ ಎಂಬ ಬಗ್ಗೆ ಸಾರ್ವಜನಿಕರಿಗೆ ಅನುಮಾನವಿತ್ತು. ಇದೀಗ ಈ ಬಗ್ಗೆ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಸ್ಪಷ್ಟನೆ ದೊರೆತಿದ್ದು ಬಸ್ ಗಳು ಎಂದಿನಂತೆ ಸಂಚರಿಸುತ್ತವೆ. ಅದರಲ್ಲಿ ಯಾವುದೇ ವ್ಯತ್ಯಯ ಇಲ್ಲ ಎಂದು ತಿಳಿಸಿದ್ದಾರೆ.
- Advertisement -