- Advertisement -
- Advertisement -
ಕಾರವಾರ: ಕೆಎಸ್ಆರ್ಟಿಸಿ ಬಸ್ ಚಾಲಕರೊಬ್ಬರು ಸಾವಿನಲ್ಲೂ ಕರ್ತವ್ಯಪ್ರಜ್ಞೆ ಮೆರೆದಿದ್ದಾರೆ. ಉತ್ತರಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ಮೈನಳ್ಳಿ ಬಳಿ ಕೆಎಸ್ಆರ್ಟಿಸಿ ಬಸ್ ಚಾಲಕ ಮಲ್ಲಪ್ಪ ಸೋಮಪ್ಪನವರ (56) ಬಸ್ ಚಲಾಯಿಸುತ್ತಿರುವಾಗಲೇ ಎದೆ ನೋವು ಕಾಣಿಸಿಕೊಂಡಿದೆ. ಚಾಲಕ ಮಲ್ಲಪ್ಪ ಕೂಡಲೇ ಬಸ್ನ್ನು ರಸ್ತೆಯ ಪಕ್ಕಕ್ಕೆ ನಿಲ್ಲಿಸಿದ್ದಾರೆ. ತಕ್ಷಣ ಬಸ್ನಲ್ಲಿದ 38 ಪ್ರಯಾಣಿಕರು ಕೆಳಗಿಳಿದಿದ್ದಾರೆ.
ನಂತರ ಪ್ರಯಾಣಿಕರು ಚಾಲಕನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಾಲಕ ಆಸ್ಪತ್ರೆಗೆ ಹೋಗುವಷ್ಟರಲ್ಲೇ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
- Advertisement -