Friday, May 17, 2024
Homeತಾಜಾ ಸುದ್ದಿವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಕೊಟ್ಟ ಕೆಎಸ್ ಆರ್ ಟಿಸಿ : ಬಸ್ ಪಾಸ್ ಅವಧಿ ವಿಸ್ತರಣೆ

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಕೊಟ್ಟ ಕೆಎಸ್ ಆರ್ ಟಿಸಿ : ಬಸ್ ಪಾಸ್ ಅವಧಿ ವಿಸ್ತರಣೆ

spot_img
- Advertisement -
- Advertisement -

ಬೆಂಗಳೂರು : ರಾಜ್ಯದ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಸಿಹಿ ಸುದ್ದಿ ಕೊಟ್ಟಿದೆ. 2021-22ನೇ ಸಾಲಿನ ಪದವಿ, ವೃತ್ತಿಪರ ಕೋರ್ಸ್, ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಅವಧಿಯ ನಂತರವೂ ಪರೀಕ್ಷೆ ನಿಗದಿಯಾಗಿದ್ದು, ಈ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಪಾಸ್ ಅವಧಿಯನ್ನು ವಿಸ್ತರಿಸಿ ಕೆಎಸ್ಸಾರ್ಟಿಸಿ ಆದೇಶ ಹೊರಡಿಸಿದೆ.

ಈ ಬಗ್ಗೆ ಕೆಎಸ್ಸಾರ್ಟಿಸಿ ಪತ್ರಿಕಾ ಮಾಹಿತಿ ನೀಡಿದ್ದು, 2021-22ನೇ ಸಾಲಿನ ಪದವಿ, ವೃತ್ತಿಪರ ಕೋರ್ಸ್, ಕಾನೂನು ಹಾಗೂ ಸ್ನಾತಕೋತ್ತರ ಪದವಿಯ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆಗಸ್ಟ್, ಸೆಪ್ಟೆಂಬರ್, ನವೆಂಬರ್ ವರೆಗೂ ತರಗತಿಗಳು ಹಾಗೂ ಪರೀಕ್ಷೆ ನಡೆಯುವುದರಿಂದ ಬಸ್ ಪಾಸ್ ಅವಧಿಯನ್ನು ವಿಸ್ತರಿಸುವಂತೆ ಕೋರಲಾಗಿತ್ತು.

- Advertisement -
spot_img

Latest News

error: Content is protected !!