- Advertisement -
- Advertisement -
ಮಂಗಳೂರು: ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ದೇಶವನ್ನು ಪ್ರತಿನಿಧಿಸುತ್ತಿರುವ ಕುಡ್ಲದ ದಿವಿತಾ ರೈಗೆ ಬಂಟರ ಮಾತೃಸಂಘ ಹಾಗೂ ಮಂಗಳೂರು ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ವಸತಿ ನಿಲಯದ ಅಮೃತೋತ್ಸವ ಸಮಿತಿ ವತಿಯಿಂದ ಸೆಪ್ಟೆಂಬರ್ 6 ರಂದು ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಅಂದು ಸಂಜೆ ನಾಲ್ಕು ಗಂಟೆಗೆ ಮಂಗಳೂರಿನ ಗೀತಾ ಶೆಟ್ಟಿ ಮೆಮೋರಿಯಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷರಾದ ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದ್ದಾರೆ.
- Advertisement -