- Advertisement -
- Advertisement -
ಸುಬ್ರಮಣ್ಯ; ಕುಮಾರಧಾರ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಸ್ನಾನಘಟ್ಟದ ಬಳಿ ಭಕ್ತರು ಹಾಗೂ ಸಾರ್ವಜನಿಕರು ತೆರಳದಂತೆ ಕಡಬ ತಹಶೀಲ್ದಾರ್ ಆದೇಶ ನೀಡಿದ್ದಾರೆ.
ಕಡಬ ತಾಲೂಕಿನಾದ್ಯಂತ ಕಳೆದ 2 ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ಸುಬ್ರಹ್ಮಣ್ಯ ಗ್ರಾಮದ ಸುಬ್ರಹ್ಮಣ್ಯ ಸ್ನಾನಘಟ್ಟದಲ್ಲಿ ಕುಮಾರಧಾರ ನದಿಯು ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತಾದಿಗಳು ಹಾಗೂ ಪ್ರವಾಸಿಗಳು ಬಂದು ಸ್ನಾನಘಟ್ಟದಲ್ಲಿ ಸ್ನಾನ ಮಾಡುವ ಉದ್ದೇಶಕ್ಕೆ ಇಳಿಯುತ್ತಿದ್ದು ಈ ವೇಳೆ ಅನಾಹುತ ನಡೆಯದಂತೆ ಮುನ್ನೆಚರಿಕಾ ಕ್ರಮವಾಗಿ ಸ್ನಾನಘಟ್ಟದ ಬಳಿ ಭಕ್ತರು ಹಾಗೂ ಸಾರ್ವಜನಿಕರು ತೆರಳದಂತೆ ಕಡಬ ತಹಶೀಲ್ದಾರ್ ಆದೇಶ ನೀಡಿದ್ದಾರೆ.
- Advertisement -