Monday, May 6, 2024
Homeಕರಾವಳಿಸುಬ್ರಮಣ್ಯ;ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಕುಮಾರಧಾರ ನದಿ; ಸ್ನಾನಘಟ್ಟದ ಬಳಿ ತೆರಳದಂತೆ ಕಡಬ ತಹಶೀಲ್ದಾರ್ ಆದೇಶ

ಸುಬ್ರಮಣ್ಯ;ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಕುಮಾರಧಾರ ನದಿ; ಸ್ನಾನಘಟ್ಟದ ಬಳಿ ತೆರಳದಂತೆ ಕಡಬ ತಹಶೀಲ್ದಾರ್ ಆದೇಶ

spot_img
- Advertisement -
- Advertisement -

ಸುಬ್ರಮಣ್ಯ; ಕುಮಾರಧಾರ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು  ಸ್ನಾನಘಟ್ಟದ ಬಳಿ ಭಕ್ತರು ಹಾಗೂ ಸಾರ್ವಜನಿಕರು ತೆರಳದಂತೆ ಕಡಬ ತಹಶೀಲ್ದಾರ್ ಆದೇಶ ನೀಡಿದ್ದಾರೆ.

ಕಡಬ ತಾಲೂಕಿನಾದ್ಯಂತ ಕಳೆದ 2 ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ಸುಬ್ರಹ್ಮಣ್ಯ ಗ್ರಾಮದ ಸುಬ್ರಹ್ಮಣ್ಯ ಸ್ನಾನಘಟ್ಟದಲ್ಲಿ ಕುಮಾರಧಾರ ನದಿಯು ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತಾದಿಗಳು ಹಾಗೂ ಪ್ರವಾಸಿಗಳು ಬಂದು ಸ್ನಾನಘಟ್ಟದಲ್ಲಿ ಸ್ನಾನ ಮಾಡುವ ಉದ್ದೇಶಕ್ಕೆ ಇಳಿಯುತ್ತಿದ್ದು ಈ ವೇಳೆ ಅನಾಹುತ ನಡೆಯದಂತೆ ಮುನ್ನೆಚರಿಕಾ ಕ್ರಮವಾಗಿ ಸ್ನಾನಘಟ್ಟದ ಬಳಿ ಭಕ್ತರು ಹಾಗೂ ಸಾರ್ವಜನಿಕರು ತೆರಳದಂತೆ ಕಡಬ ತಹಶೀಲ್ದಾರ್ ಆದೇಶ ನೀಡಿದ್ದಾರೆ.

- Advertisement -
spot_img

Latest News

error: Content is protected !!