ಸುಬ್ರಮಣ್ಯ; ಕರಾವಳಿ ಹಾಗೂ ಪಶ್ಚಿಮಘಟ್ಟದಲ್ಲಿ ಕಳೆದ ಎರಡು ಮೂರು ದಿನಗಳಿಂದ ಎಡೆಬಿಡದೇ ಮಳೆಯಾಗುತ್ತಿದ್ದು ಬಹುತೇಕ ನದಿಗಳು ತುಂಬ ಹರಿಯುತ್ತಿವೆ. ಇನ್ನು ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಎರಡನೇ ಬಾರಿ ಮುಳುಗಡೆಯಾಗಿದೆ.
ಇನ್ನು ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು ಸ್ನಾನಘಟ್ಟ ಮುಳುಗಡೆಯಾಗಿರೋದರಿಂದ ಯಾತ್ರಾರ್ಥಿಗಳಿಗೆ ತೀರ್ಥಸ್ನಾನಕ್ಕೆ ಸಮಸ್ಯೆಯಾಗುತ್ತಿದೆ. ಹಾಗಾಗಿ ನದಿ ನೀರನ್ನು ಡ್ರಮ್ ನಲ್ಲಿ ತುಂಬಿಸಿಸಿ ಭಕ್ತರಿಗೆ ತೀರ್ಥಸ್ನಾನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಇನ್ನು ನದಿ ತುಂಬಿ ಹರಿಯುತ್ತಿರುವ ಹಿನ್ನಲೆ ನದಿ ಪಾತ್ರಕ್ಕೆ ಭಕ್ತಾಧಿಗಳು ತೆರಳದಂತೆ ಕ್ಷೇತ್ರದ ವತಿಯಿಂದ ಸೂಚನೆ ನೀಡಲಾಗಿದ್ದು, ಸ್ನಾನಘಟ್ಟದ ಬಳಿ ಹೋಮ್ ಗಾರ್ಡ್ ಮತ್ತು ದೇವಸ್ಥಾನದ ಸೆಕ್ಯುರಿಟಿ ಗಾರ್ಡ್ ಗಳನ್ನು ನಿಯೋಜಿಸಲಾಗಿದೆ.
ಇನ್ನು ಕುಮಾರಧಾರಾ ನದಿ ತುಂಬಿ ಹರಿಯುತ್ತಿರುವ ಕಾರಣ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟದಲ್ಲಿ ದೇವರ ಮೀನುಗಳು ಆಗಮಿಸಿದೆ. ಈ ವೇಳೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಿಬ್ಬಂದಿ ಸ್ನಾನಘಟ್ಟದ ಬಳಿ ಬಂದ ದೇವರ ಮೀನುಗಳಿಗೆ ಆಹಾರ ನೀಡಿದ್ದಾರೆ.