- Advertisement -
- Advertisement -
ಧರ್ಮಸ್ಥಳ; ನಿನ್ನೆ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ರಿಲೀಸ್ ಆದ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಹೆಲಿಕಾಫ್ಟರ್ ಮೂಲಕ ಧರ್ಮಸ್ಥಳಕ್ಕೆ ಆಗಮಿಸಿದ ಕುಮಾರಸ್ವಾಮಿ ಈಗ ಸನ್ನಿಧಿ ವಸತಿ ಗೃಹಕ್ಕೆ ತೆರಳಿ ಅಲ್ಲಿ ವಿಶ್ರಾಂತಿ ಪಡೆದು ಬಳಿಕ ನಾಳ ದುರ್ಗಾಪರಮೇಶ್ವರಿ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ಅಲ್ಲಿಂದ ವಾಪಾಸ್ ಸನ್ನಿಧಿ ವಸತಿಗೃಹಕ್ಕೆ ಬಂದು ತಂಗಲಿರುವ ಕುಮಾರಸ್ವಾಮಿ ನಾಳೆ ಬೆಳಗ್ಗೆ 6 ಗಂಟೆಗೆ ಮಂಜುನಾಥನ ದರ್ಶನ ಪಡೆಯಲಿದ್ದಾರೆ. ಬಳಿಕ ವಾಪಾಸ್ ತೆರಳಲಿದ್ದಾರೆ. ಇನ್ನು ಮಾಜಿ ಸಿಎಂ ಹೆಚ್ಡಿಕೆಗೆ ಜೆಡಿಎಸ್ ಎಂ.ಎಲ್.ಸಿ ಭೋಜೇ ಗೌಡ ಸಾಥ್ ನೀಡಿದ್ದಾರೆ.
- Advertisement -