Saturday, May 18, 2024
Homeತಾಜಾ ಸುದ್ದಿಎಲ್ಲಾ ಶಾಸಕರ ಬಗ್ಗೆ ತನಿಖೆಯಾಗಲಿ ಯಾರಿಗೆಲ್ಲಾ ಅನೈತಿಕ ಸಂಬಂಧವಿದೆ ಗೊತ್ತಾಗ್ಲಿ ಅಂದ ಸುಧಾಕರ್: ನಾನು ಒಂದು...

ಎಲ್ಲಾ ಶಾಸಕರ ಬಗ್ಗೆ ತನಿಖೆಯಾಗಲಿ ಯಾರಿಗೆಲ್ಲಾ ಅನೈತಿಕ ಸಂಬಂಧವಿದೆ ಗೊತ್ತಾಗ್ಲಿ ಅಂದ ಸುಧಾಕರ್: ನಾನು ಒಂದು ಬಾರಿ ಎಡವಿದ್ದೆ ಅಂದ ಕುಮಾರಸ್ವಾಮಿ

spot_img
- Advertisement -
- Advertisement -

ಬೆಂಗಳೂರು: ಯಾರು ಇವತ್ತು ಮರ್ಯಾದಾ ಪುರುಷರು, ಶ್ರೀರಾಮಚಂದ್ರನಂತವರು ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಮಾತನಾಡುತ್ತಿದ್ದಾರೋ ಅವರಿಗೆ ಸವಾಲು ಹಾಕುತ್ತೇನೆ, ನನ್ನನ್ನು ಸೇರಿಸಿ 224 ಜನ ಶಾಸಕರು ತನಿಖೆ ಎದುರಿಸಲಿ, ಯಾರ್ಯಾರು ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾರೆ ಎಂದು ತನಿಖೆಯಿಂದ ಹೊರಬರಲಿ ಎಂಬ ಸಚಿವ ಸುಧಾಕರ್ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ.

ಎಲ್ಲರ ಮನೆ ದೋಸೆನೂ ತೂತೇ, ಯಾರೂ ಕೂಡ ಸತ್ಯಹರಿಶ್ಚಂದ್ರರಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.ಸಚಿವ ಸುಧಾಕರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಭೂಮಿ ಮೇಲೆ ಜನಿಸಿರುವ ಪ್ರತಿಯೊಂದು ಜೀವಿಗೂ ಸಹಜ ಪ್ರಕ್ರಿಯೆ ಇದೆ, ನಾನು ಈ ಹಿಂದೆ ಅಧಿವೇಶನದಲ್ಲಿ ನಾನು ಎಡವಿದ್ದ ಬಗ್ಗೆ ಹೇಳಿ ತಪ್ಪು ಒಪ್ಪಿಕೊಂಡಿದ್ದೆ.

ಇಲ್ಲಿ ಯಾರು ಹರಿಶ್ಚಂದ್ರರಲ್ಲ, ಸುಮ್ಮನೆ ಏಕೆ ರಾಡಿ ಎರಚಿಕೊಳ್ಳುತ್ತೀರಿ. ನೀವು ಸತ್ಯವಂತರಾದರೇ ನೀವು ಕೋರ್ಟ್ ಗೆ ಏಕೆ ತಡೆಯಾಜ್ಞೆ ತಂದಿರಿ, ನಾನು ಮಾಡಿರುವ ತಪ್ಪು ಒಪ್ಪಿಕೊಂಡಿರುವಾಗ ನನ್ನ ಹೆಸರನ್ನು ಏಕೆ ಎಳೆದು ತರುತ್ತೀರಿ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ನೀವೇ ಸಮಸ್ಯೆ ತಂದು ಬೇರೆಯವರ ಮೇಲೆ ಏಕೆ ಕೆಸರು ಹಾಕುತ್ತಿದ್ದಾರೆ. ಬೀದಿಯಲ್ಲಿ ನಿಂತು ನಗೆಪಾಟಲಿಗೀಡಾಗುತ್ತಿದ್ದಾರೆ ಎಂದ ಕುಮಾರ ಸ್ವಾಮಿ, ಜನರ ಸಮಸ್ಯೆಯನ್ನು ಬಗೆಹರಿಸುವುದನ್ನು ಬಿಟ್ಟು, ಕೆಲಸಕ್ಕೆ ಬಾರದ ವಿಷಯಗಳ ಬಗ್ಗೆ ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

- Advertisement -
spot_img

Latest News

error: Content is protected !!