- Advertisement -
- Advertisement -
ಸುಳ್ಯ: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ನಾಳೆ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಬೆಳಗ್ಗೆ ಏಳು ಗಂಟೆಗೆ ಭೇಟಿ ನೀಡಲಿದ್ದಾರೆ. ಮಂಗಳೂರಿಗೆ ವಿಮಾನದ ಮೂಲಕ ಆಗಮಿಸುವ ಅವರು ಬಳಿಕ ರಸ್ತೆ ಮಾರ್ಗದ ಮೂಲಕ ಪ್ರವೀಣ್ ಮನೆ ತಲುಪಲಿದ್ದಾರೆ.
ಅಲ್ಲಿಂದ ಇತ್ತೀಚೆಗೆ ಕೊಲೆಯಾದ ಮಸೂದ್ ಅವರ ಕಳಂಜದ ನಿವಾಸಕ್ಕೆ ಭೇಟಿ ಕೊಡಲಿದ್ದಾರೆ. ನಂತರ ಸುರತ್ಕಲ್ ಫಾಜಿಲ್ ಮನೆಗೆ ಭೇಟಿ ನೀಡಲಿದ್ದಾರೆ. ಮೂವರಿಗೂ ತಲಾ 25 ಲಕ್ಷ ಪರಿಹಾರ ನೀಡಲಿದ್ದಾರೆ ಎನ್ನಲಾಗಿದೆ.ಇನ್ನು ಮಾಜಿ ಸಿಎಂ ಹೆಚ್ಡಿಕೆ ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸಾಥ್ ನೀಡಲಿದ್ದಾರೆ.
- Advertisement -