- Advertisement -
- Advertisement -
ಧರ್ಮಸ್ಥಳ; ನಿನ್ನೆ ಧರ್ಮಸ್ಥಳಕ್ಕೆ ಆಗಮಿಸಿ ಸನ್ನಿಧಿ ವಸತಿ ಗೃಹದಲ್ಲಿ ತಂಗಿದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಇಂದು ಬೆಳಗ್ಗೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಮೊದಲು ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಇದೇ ವೇಳೆ ಕುಮಾರಸ್ವಾಮಿಗೆ ಬೆಳ್ಳಿಯ ರುದ್ರಾಕ್ಷಿ ಮಾಲೆ ಹಾಕಿ ಡಾ.ವೀರೇಂದ್ರ ಹೆಗ್ಗಡೆ ಗೌರವಿಸಿದರು.
ಹೆಗ್ಗಡೆ ಅವರ ಭೇಟಿಯ ಬಳಿಕ ಕುಮಾರಸ್ವಾಮಿ ಅವರು ಮಂಜುನಾಥನ ದರ್ಶನ ಪಡೆದರು. ಈ ವೇಳೆ ಎಂ.ಎಲ್.ಸಿ ಬೋಜೆ ಗೌಡ ಹಾಗೂ ಜೆಡಿಎಸ್ ಕಾರ್ಯಕರ್ತರು ಜೊತೆಗಿದ್ದರು.
- Advertisement -