Tuesday, April 23, 2024
Homeಕರಾವಳಿಉಡುಪಿಕುಂದಾಪುರ: ಆಟವಾಡುತ್ತಿದ್ದ 13 ವರ್ಷದ ಬಾಲಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ಆಟವಾಡುತ್ತಿದ್ದ 13 ವರ್ಷದ ಬಾಲಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

spot_img
- Advertisement -
- Advertisement -

ಕುಂದಾಪುರ: ಮಕ್ಕಳೊಡನೆ ಆಟವಾಡುತ್ತಿದ್ದ ಬಾಲಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಮದಾಪುರ ತಾಲೂಕಿನ ಬಸ್ರೂರು ಎಂಬಲ್ಲಿ ಪತ್ತೆಯಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಬಾಲಕನನ್ನು ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಕುಮದಾಪುರ ಸರ್ಕಾರೀ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮೃತಪಟ್ಟಿದ್ದಾನೆ. ಬಸ್ರೂರಿನ ನಿವಾಸಿ ಎಂಟನೇ ತರಗತಿ ವಿದ್ಯಾರ್ಥಿ ಪ್ರಶಾಂತ್(13) (ಹೆಸರು ಬದಲಿಸಿದೆ) ಎಂಬಾತನೇ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾದ ಬಾಲಕ ಎಂದು ತಿಳಿದು ಬಂದಿದೆ.
ಬಸ್ರೂರಿನ ತನ್ನ ಚಿಕ್ಕಮ್ಮನ ಮನೆಯಲ್ಲಿ ಉಳಿದ ಮಕ್ಕಳೊಂದಿಗೆ ಆಟ ವಾಡುತ್ತಿದ್ದ ಪ್ರಕಾಶ ಇದ್ದಕ್ಕಿದ್ದಂತೆ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದು, ತಕ್ಷಣ ಆಟವಾಡುತ್ತಿದ್ದ ಮಕ್ಕಳು ನೆರೆ ಮನೆಯವರನ್ನು ಕರೆದಿದ್ದಾರೆ. ಪಕ್ಕದ ಮನೆಯವರು ಬಂದು ಬಾಲಕನನ್ನು ಕೆಳಗೆ ಇಳಿಸಿದ ಬಳಿಕ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಬಾಲಕ ಗಂಭೀರ ಸ್ಥಿತಿಯಲ್ಲಿದ್ದುದನ್ನು ಕಂಡ ಅಲ್ಲಿನ ವೈದ್ಯರು ಕುಂದಾಪುರ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದು, ಬಾಲಕ ಆಸ್ಪತ್ರೆ ತಲುಪುವಷ್ಟರಲ್ಲೆ ಅಸು ನೀಗಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಬಾಲ್ಯದಲ್ಲಿಯೇ ತಂದೆ ತಾಯಿಯನ್ನು ಕಳೆದುಕೊಂಡಿದ್ದ ದುರ್ದೈವಿ ಬಾಲಕ ತನ್ನ ಚಿಕ್ಕಮ್ಮನ ಮನೆಯಲ್ಲಿ ಶಾಲೆಗೆ ಹೋಗುತ್ತಿದ್ದ. ಚಿಕ್ಕಮ್ಮ ಮತ್ತು ಚಿಕ್ಕಪ್ಪ ಉದ್ಯೋಗ ನಿಮಿತ್ತ ಪ್ರತಿ ದಿನ ಬೆಳಗ್ಗೆ ಮನೆಯಿಂದ ಹೊರಗೆ ಹೋಗುತ್ತಿದ್ದರು. ಕೊರೊನಾ ವೈರಸ್‌ನಿಂದಾಗಿ ಸರ್ಕಾರ ರಜೆ ಘೋಷಿಸಿದ್ದರಿಂದ ಚಿಕ್ಕಮ್ಮನ ಮಕ್ಕಳು ಹಾಗೂ ಈತ ಮನೆಯಲ್ಲಿಯೇ ಆಟವಾಡುತ್ತಿದ್ದರು. ಆದರೆ ಬಾಲಕ ಯಾಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎನ್ನುವುದು ಮಾತ್ರ ಇನ್ನೂ ನಿಗೂಢವಾಗಿದೆ. ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!