- Advertisement -
- Advertisement -
ತುಮಕೂರು: ಅಪಘಾತದಲ್ಲಿ ಗಾಯಗೊಂಡವರನ್ನು ಶಾಸಕರೇ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಿದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ನಲ್ಲಿ ನಡೆದಿದೆ.
ಕುಣಿಗಲ್ ತಾಲೂಕಿನ ಹುತ್ರಿದುರ್ಗ ಹೋಬಳಿಯ ಕಲ್ಲನಾಯಕನಹಳ್ಳಿ ಬಳಿ ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತವಾಗಿ ಮೂವರಿಗೆ ಗಾಯವಾಗಿದ್ರೆ, ಒಬ್ಬರಿಗೆ ಗಂಭೀರ ಗಾಯವಾಗಿತ್ತು.
ಈ ಸಂಧರ್ಭದಲ್ಲಿ ಗಣೇಶೋತ್ಸವದಲ್ಲಿ ಭಾಗಿಯಾಗಿ ವಾಪಾಸಗುತ್ತಿದ್ದ ಕುಣಿಗಲ್ ಶಾಸಕ ಡಾ. ರಂಗನಾಥ್ ಅಪಘಾತಕ್ಕೀಡಾದವರನ್ನು ಕಂಡು ಕೂಡಲೇ ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಸ್ವತ: ವೈದ್ಯರಾಗಿರುವ ಶಾಸಕ ಡಾ. ರಂಗನಾಥ್ ವೈದ್ಯರಿಗಾಗಿ ಕಾಯದೇ ತಾವೇ ಖುದ್ದು ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.
ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಶಾಸಕ ರಂಗನಾಥ್ ಹೆಚ್ಚಿನ ಚಿಕಿತ್ಸೆಗೆ ಗಾಯಾಳುಗಳನ್ನು ಬೆಂಗಳೂರಿಗೆ ಕಳುಹಿಸಿದ್ದಾರೆ.
- Advertisement -